ಕಾಂಗ್ರೆಸ್‌ಗಿಂತ 5 ಪಟ್ಟು ಅಧಿಕ ಅನುದಾನ ಕೊಟ್ಟ ಪ್ರಧಾನಿ ಮೋದಿ: ರಾಜ್ಯಕ್ಕೆ 7,351 ಕೋಟಿ ರೂ. ಕೊಡುಗೆ

ಕಾಂಗ್ರೆಸ್‌ಗಿಂತ 5 ಪಟ್ಟು ಅಧಿಕ ಅನುದಾನ ಕೊಟ್ಟ ಪ್ರಧಾನಿ ಮೋದಿ: ರಾಜ್ಯಕ್ಕೆ 7,351 ಕೋಟಿ ರೂ. ಕೊಡುಗೆ

Published : Mar 25, 2023, 05:15 PM ISTUpdated : Mar 25, 2023, 05:27 PM IST

ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈ ವರ್ಷ 7,351 ಕೋಟಿ ರೂಪಾಯಿಯನ್ನು ಕರ್ನಾಟಕಕ್ಕೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

ದಾವಣೆಗೆರೆ (ಮಾ.25):  ಪ್ರಧಾನಿ ಮೋದಿ ಡಬಲ್ ಎಂಜಿನ್ ಸರ್ಕಾರಕ್ಕೆ 5 ಪಟ್ಟು ಹಣವನ್ನು ಕೇಂದ್ರ ನೀಡಿದೆ. ರಾಷ್ಟ್ರೀಯ ಹೆದ್ದಾರಿಗೆ 6,000 ಕಿಲೋಮೀಟರ್ ರಸ್ತೆಗೆ ಹಣ ಮಂಜೂರು ಮಾಡಲಾಗಿದೆ. ಈ ವರ್ಷ 7,351 ಕೋಟಿ ರೂಪಾಯಿಯನ್ನು ಕರ್ನಾಟಕಕ್ಕೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ದಾಹ. 60 ವರ್ಷ ಅಧಿಕಾರದಲ್ಲಿದ್ದರೂ ದೇಶದ ಬಗ್ಗೆ ಕಾಳಜಿ ಇಲ್ಲ, ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ. ಆದರೆ, ಭದ್ರಾ ಮೇಲ್ಡಂಡೆ ಯೋಜನೆಗೆ 5,000 ಕೋಟಿ ರೂಪಾಯಿ ನೀಡಲಾಗಿದೆ ಎಂದು ಮುಖ್ಯಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಇಂದು ದಾವಣೆಗೆರೆಯಲ್ಲಿ ಆಯೋಜಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭ ಪಾಲ್ಗೊಂಡು ಬೊಮ್ಮಾಯಿ ಮಾತನಾಡಿದ್ದಾರೆ. 

ಎಲ್ಲಾ ದೇಶಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತಕ್ಕೆ ಗೌರವ ನೀಡುತ್ತಿದೆ. ಪಾಕಿಸ್ತಾನದಲ್ಲಿ ಅಲ್ಲಿಯ ಸಾಮಾನ್ಯ ಜನ, ನಮಗೆ ನರೇಂದ್ರ ಮೋದಿಯಂತ ನಾಯಕತ್ವ ಬೇಕು ಎಂದು ಹೇಳುತ್ತಿದೆ. ಕೋವಿಡ್ ಸಂಪೂರ್ಣವಾಗಿ ನಿಯಂತ್ರಣ ಮಾಡಿ ಭಾರತವನ್ನು ಮುನ್ನಡೆಬಲ್ಲ ಮೋದಿ ನಾಯಕತ್ವ ಚೀನಾಗೆ ಬೇಕು ಎಂದು ಚೀನಾದ ಪತ್ರಿಕೆ ಹೇಳುತ್ತಿದೆ.  ಆದರೆ ನಮ್ಮರು, ವಿರೋಧ ಪಕ್ಷದ ನಾಯಕರು ಪ್ರಧಾನಿ ಮೋದಿ ಟೀಕೆ ಮಾಡಿ, ಭಾರತದ ಪ್ರಜಾಪ್ರಭುತ್ವವನ್ನು ವಿರೋಧಿ ಇತರ ದೇಶಗಳ ನೆರವು ಪಡೆಯುತ್ತಿದ್ದಾರೆ. ಇಂತಹ ನಾಯಕತ್ವ ನಮಗೆ ಬೇಕಾ ಅನ್ನೋದನ್ನು ನಾವು ಯೋಚಿಸಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more