ರಾಜಧಾನಿಯಲ್ಲಿ ರೌಡಿಸಂ ಹುಟ್ಟಡಗಿಸಲು ಖಾಕಿ ಸಜ್ಜು: ಪುಡಿ ರೌಡಿಗಳ ಮಟ್ಟಹಾಕುವಂತೆ ಕಮಿಷನರ್ ವಾರ್ನ್ !

ರಾಜಧಾನಿಯಲ್ಲಿ ರೌಡಿಸಂ ಹುಟ್ಟಡಗಿಸಲು ಖಾಕಿ ಸಜ್ಜು: ಪುಡಿ ರೌಡಿಗಳ ಮಟ್ಟಹಾಕುವಂತೆ ಕಮಿಷನರ್ ವಾರ್ನ್ !

Published : Aug 14, 2023, 09:59 AM IST

ರೌಡಿಶೀಟರ್ ಸಿದ್ದಾಪುರ ಮಹೇಶನ ಕೊಲೆಯಾದ ಬಳಿಕ ಬೆಂಗಳೂರಿನಲ್ಲಿ ಮತ್ತೆ ರೌಡಿ ಆ್ಯಕ್ಟಿವಿಟಿ ಜಾಸ್ತಿಯಾಗಿರೊ ರೀತಿ ಕಾಣ್ತಾಯಿದೆ. ರಸ್ತೆಯಲ್ಲಿ ಕಿರಿಕ್ ಮಾಡೋ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗ್ತಿದೆ. ಇದಕ್ಕೆಲ್ಲಾ ಕಡಿವಾಣ ಹಾಕೋಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊಸ ತಂತ್ರ ರೂಪಿಸಿದ್ದಾರೆ. 

ರಾಜಧಾನಿ ಬೆಂಗಳೂರಲ್ಲಿ ಮತ್ತೆ ರೌಡಿಗಳ ಸಾಮ್ರಾಜ್ಯ ಸೃಷ್ಟಿಯಾಗ್ತಿದೆ. ರೌಡಿಗಳ(Rowdies) ಗ್ಯಾಂಗ್‌ವಾರ್ ಮರು ಜನ್ಮ ತಾಳ್ತಿದೆ. ಕೆಲವರು ಹವಾ ಕ್ರಿಯೇಟ್ ಮಾಡೋಕೆ  ಮಾರಕಾಸ್ತ್ರ ಬೀಸಿದ್ರೆ, ಇನ್ನು ಕೆಲವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳೋಕೆ, ವಿರೋಧಿ ಗ್ಯಾಂಗ್‌ನ ತಲೆ ಉರುಳಿಸೋ ಕೆಲಸ ಮಾಡ್ತಿದ್ದಾರೆ. ಸಿದ್ದಾಪುರ ಮಹೇಶ, ಮಡಿವಾಳ ಕಪಿಲನ ಕೊಲೆಯೇ ಇದಕ್ಕೆ ತಾಜಾ ಸಾಕ್ಷಿ. ಹೀಗಾಗಿ ಬಾಲ ಬಿಚ್ಚಿದ ರೌಡಿಗಳ ಹೆಡೆಮುರಿಕಟ್ಟೋಕೆ ಈಗ ಪೊಲೀಸರು(police) ಅಖಾಡಕ್ಕಿಳಿದಿದ್ದಾರೆ. ರೌಡಿಸಂ ಕಂಟ್ರೋಲ್‌ಗೆ ಡಿಸಿಪಿಗಳ ಮ್ಯಾರಥಾನ್ ಮೀಟಿಂಗ್ ಮಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್. ನಗರದಲ್ಲಿ ರೌಡಿಗಳ ಆ್ಯಕ್ಟಿವಿಟಿ ಮಟ್ಟಹಾಕಲು ಖಡಕ್ ವಾರ್ನ್ ಮಾಡಿದ್ದಾರೆ. ಪ್ರತಿಯೊಬ್ಬರ ಮೇಲೂ ಕಣ್ಣಿಟ್ಟು, ಬಾಲ ಬಿಚ್ಚಿದವರ ಮೇಲೆ CRPC 110 ಅಡಿ ಬಾಂಡ್ ಬರೆಸಿಕೊಳ್ಳುವಂತೆ ಸೂಚಿಸಿದ್ದಾರೆ. ಜೈಲಿನಲ್ಲಿರುವ ರೌಡಿಗಳ ಚಲನವಲನದ ಮೇಲೂ ನಿಗಾ ಇರಿಸುವಂತೆ ಸೂಚಿಸಿದ್ದಾರೆ. ಮಹೇಶ್‌ನ ಹತ್ಯೆ(Mahesh murder) ಸೇಡಿಗಾಗಿ ಕಾಯುತ್ತಿರುವವ ನಾಗನ ವಿರೋಧಿ ಪಡೆ ಎಲ್ಲಿದೆ. ಸೈಲೆಂಟ್ ಸುನೀಲಾ, ವಿಲ್ಸನ್ ಗಾರ್ಡನ್ ನಾಗನ ಜತೆ ಯಾರ್ಯಾರು ಸಂಪರ್ಕದಲ್ಲಿದ್ದಾರೆಂದು ಪೊಲೀಸರು ಮಾಹಿತಿ ಕಲೆ ಹಾಕ್ತಿದ್ದಾರೆ. ಒಂದೆಡೆ ರೌಡಿ ಶೀಟರ್‌ಗಳ ಉಪಟಳವಾದ್ರೆ. ಇನ್ನೊಂದೆಡೆ ರೋಡ್ ರೇಜ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗ್ತಿವೆ. ಪುಂಡರು ರಸ್ತೆಯಲ್ಲಿ ಹೋಗ್ತಿರೊ ಅಮಾಯಕರ ಮೇಲೆ ಎಗರಿ ಬೀಳ್ತಿದ್ದಾರೆ. ಇನ್ಮುಂದೆ ಇಂಥವರ ವಿರುದ್ಧವೂ ರೌಡಿ ಶೀಟ್ ಓಪನ್ ಆಗೋದು ಫಿಕ್ಸ್. ವಿನಾಕಾರಣ ರಸ್ತೆಗಳಲ್ಲಿ ಅಮಾಯಕರಿಗೆ ತೊಂದರೆ ಕೊಟ್ಟರೆ, ಪುಂಡಾಟ ಮೆರೆದರೆ ರೌಡಿಶೀಟರ್ ತೆರೆಯುವಂತೆ ನಗರ ಪೊಲೀಸ್ ಆಯುಕ್ತರು ಪೊಲೀಸರಿಗೆ ಫುಲ್ ಪವರ್ ಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಬ್ಯಾನ್ ಆದ್ರೂ ಇನ್ನೂ ಬುದ್ಧಿ ಕಲಿಯದ PFI: ಸ್ಲೀಪರ್ ಸೆಲ್‌ಗಳ ಮೂಲಕ ಆ್ಯಕ್ಟಿವ್..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more