ರಾಜಧಾನಿಯಲ್ಲಿ ರೌಡಿಸಂ ಹುಟ್ಟಡಗಿಸಲು ಖಾಕಿ ಸಜ್ಜು: ಪುಡಿ ರೌಡಿಗಳ ಮಟ್ಟಹಾಕುವಂತೆ ಕಮಿಷನರ್ ವಾರ್ನ್ !

ರಾಜಧಾನಿಯಲ್ಲಿ ರೌಡಿಸಂ ಹುಟ್ಟಡಗಿಸಲು ಖಾಕಿ ಸಜ್ಜು: ಪುಡಿ ರೌಡಿಗಳ ಮಟ್ಟಹಾಕುವಂತೆ ಕಮಿಷನರ್ ವಾರ್ನ್ !

Published : Aug 14, 2023, 09:59 AM IST

ರೌಡಿಶೀಟರ್ ಸಿದ್ದಾಪುರ ಮಹೇಶನ ಕೊಲೆಯಾದ ಬಳಿಕ ಬೆಂಗಳೂರಿನಲ್ಲಿ ಮತ್ತೆ ರೌಡಿ ಆ್ಯಕ್ಟಿವಿಟಿ ಜಾಸ್ತಿಯಾಗಿರೊ ರೀತಿ ಕಾಣ್ತಾಯಿದೆ. ರಸ್ತೆಯಲ್ಲಿ ಕಿರಿಕ್ ಮಾಡೋ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗ್ತಿದೆ. ಇದಕ್ಕೆಲ್ಲಾ ಕಡಿವಾಣ ಹಾಕೋಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊಸ ತಂತ್ರ ರೂಪಿಸಿದ್ದಾರೆ. 

ರಾಜಧಾನಿ ಬೆಂಗಳೂರಲ್ಲಿ ಮತ್ತೆ ರೌಡಿಗಳ ಸಾಮ್ರಾಜ್ಯ ಸೃಷ್ಟಿಯಾಗ್ತಿದೆ. ರೌಡಿಗಳ(Rowdies) ಗ್ಯಾಂಗ್‌ವಾರ್ ಮರು ಜನ್ಮ ತಾಳ್ತಿದೆ. ಕೆಲವರು ಹವಾ ಕ್ರಿಯೇಟ್ ಮಾಡೋಕೆ  ಮಾರಕಾಸ್ತ್ರ ಬೀಸಿದ್ರೆ, ಇನ್ನು ಕೆಲವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳೋಕೆ, ವಿರೋಧಿ ಗ್ಯಾಂಗ್‌ನ ತಲೆ ಉರುಳಿಸೋ ಕೆಲಸ ಮಾಡ್ತಿದ್ದಾರೆ. ಸಿದ್ದಾಪುರ ಮಹೇಶ, ಮಡಿವಾಳ ಕಪಿಲನ ಕೊಲೆಯೇ ಇದಕ್ಕೆ ತಾಜಾ ಸಾಕ್ಷಿ. ಹೀಗಾಗಿ ಬಾಲ ಬಿಚ್ಚಿದ ರೌಡಿಗಳ ಹೆಡೆಮುರಿಕಟ್ಟೋಕೆ ಈಗ ಪೊಲೀಸರು(police) ಅಖಾಡಕ್ಕಿಳಿದಿದ್ದಾರೆ. ರೌಡಿಸಂ ಕಂಟ್ರೋಲ್‌ಗೆ ಡಿಸಿಪಿಗಳ ಮ್ಯಾರಥಾನ್ ಮೀಟಿಂಗ್ ಮಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್. ನಗರದಲ್ಲಿ ರೌಡಿಗಳ ಆ್ಯಕ್ಟಿವಿಟಿ ಮಟ್ಟಹಾಕಲು ಖಡಕ್ ವಾರ್ನ್ ಮಾಡಿದ್ದಾರೆ. ಪ್ರತಿಯೊಬ್ಬರ ಮೇಲೂ ಕಣ್ಣಿಟ್ಟು, ಬಾಲ ಬಿಚ್ಚಿದವರ ಮೇಲೆ CRPC 110 ಅಡಿ ಬಾಂಡ್ ಬರೆಸಿಕೊಳ್ಳುವಂತೆ ಸೂಚಿಸಿದ್ದಾರೆ. ಜೈಲಿನಲ್ಲಿರುವ ರೌಡಿಗಳ ಚಲನವಲನದ ಮೇಲೂ ನಿಗಾ ಇರಿಸುವಂತೆ ಸೂಚಿಸಿದ್ದಾರೆ. ಮಹೇಶ್‌ನ ಹತ್ಯೆ(Mahesh murder) ಸೇಡಿಗಾಗಿ ಕಾಯುತ್ತಿರುವವ ನಾಗನ ವಿರೋಧಿ ಪಡೆ ಎಲ್ಲಿದೆ. ಸೈಲೆಂಟ್ ಸುನೀಲಾ, ವಿಲ್ಸನ್ ಗಾರ್ಡನ್ ನಾಗನ ಜತೆ ಯಾರ್ಯಾರು ಸಂಪರ್ಕದಲ್ಲಿದ್ದಾರೆಂದು ಪೊಲೀಸರು ಮಾಹಿತಿ ಕಲೆ ಹಾಕ್ತಿದ್ದಾರೆ. ಒಂದೆಡೆ ರೌಡಿ ಶೀಟರ್‌ಗಳ ಉಪಟಳವಾದ್ರೆ. ಇನ್ನೊಂದೆಡೆ ರೋಡ್ ರೇಜ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗ್ತಿವೆ. ಪುಂಡರು ರಸ್ತೆಯಲ್ಲಿ ಹೋಗ್ತಿರೊ ಅಮಾಯಕರ ಮೇಲೆ ಎಗರಿ ಬೀಳ್ತಿದ್ದಾರೆ. ಇನ್ಮುಂದೆ ಇಂಥವರ ವಿರುದ್ಧವೂ ರೌಡಿ ಶೀಟ್ ಓಪನ್ ಆಗೋದು ಫಿಕ್ಸ್. ವಿನಾಕಾರಣ ರಸ್ತೆಗಳಲ್ಲಿ ಅಮಾಯಕರಿಗೆ ತೊಂದರೆ ಕೊಟ್ಟರೆ, ಪುಂಡಾಟ ಮೆರೆದರೆ ರೌಡಿಶೀಟರ್ ತೆರೆಯುವಂತೆ ನಗರ ಪೊಲೀಸ್ ಆಯುಕ್ತರು ಪೊಲೀಸರಿಗೆ ಫುಲ್ ಪವರ್ ಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಬ್ಯಾನ್ ಆದ್ರೂ ಇನ್ನೂ ಬುದ್ಧಿ ಕಲಿಯದ PFI: ಸ್ಲೀಪರ್ ಸೆಲ್‌ಗಳ ಮೂಲಕ ಆ್ಯಕ್ಟಿವ್..!

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more