SSLC ಪರೀಕ್ಷೆ: ಪೋಷಕರ ಗುಂಪು ಚದುರಿಸಲು ಲಾಠಿ ಬೀಸಿದ ಪೊಲೀಸರು

Jun 25, 2020, 12:59 PM IST

ರಾಯಚೂರು(ಜೂ.25): ಕೊರೋನಾ ಆತಂಕದ ನಡುವೆಯೇ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭವಾಗಿದೆ. ಮಕ್ಕಳನ್ನು ಪರೀಕ್ಷಾ ಕೇಂದ್ರದಲ್ಲಿ ಬಿಡಲು ಬಂದ ಪೋಷಕರು ಸಾಮಾಜಿಕ ಅಂತರವನ್ನು ಮರೆತಿದ್ದರಿಂದ ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಕಲಬುರಗಿ, ರಾಯಚೂರು ಹಾಗೂ ವಿಜಯಪುರದಲ್ಲೂ ಇಂತಹದ್ದೇ ಸನ್ನಿವೇಶ ಕಂಡು ಬಂದಿದೆ. ಇನ್ನೂ ಕೆಲವೆಡೆ ಪೋಷಕರು ಪೊಲೀಸರೊಂದಿಗೆ ವಾಗ್ವಾದವನ್ನು ನಡೆಸಿದ್ದಾರೆ. 

SSLC ಪರೀಕ್ಷೆ: ಪೊಲೀಸರ ಜತೆಗೆ ವಾಗ್ವಾದಕ್ಕಿಳಿದ ಪೋಷಕರು

ಈ ಬಾರಿಯ SSLC ಪರೀಕ್ಷೆ ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಶಿಕ್ಷಣ ಇಲಾಖೆಗೆ ಅಗ್ನಿ ಪರೀಕ್ಷೆಯಾಗಿದೆ. ವಿಪಕ್ಷಗಳ ವಿರೋಧದ ನಡುವೆಯೇ ರಾಜ್ಯ ಸರ್ಕಾರ SSLC ಪರೀಕ್ಷೆ ಆಯೋಜಿಸಿದ್ದು, ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.