ಬೆಂಗಳೂರಿನಲ್ಲಿ ಗುಂಡಿ ಗಂಡಾಂತರ: ಕೋಮಾ ಸೇರಿದ ಬೈಕ್ ಸವಾರ, ಬಿಬಿಎಂಪಿಗೆ ಇನ್ನೆಷ್ಟು ಬಲಿ ಬೇಕು?

ಬೆಂಗಳೂರಿನಲ್ಲಿ ಗುಂಡಿ ಗಂಡಾಂತರ: ಕೋಮಾ ಸೇರಿದ ಬೈಕ್ ಸವಾರ, ಬಿಬಿಎಂಪಿಗೆ ಇನ್ನೆಷ್ಟು ಬಲಿ ಬೇಕು?

Published : Nov 05, 2022, 06:59 PM IST

ಬೆಂಗಳೂರಿನಲ್ಲಿ ಗುಂಡಿ ಗಂಡಾಂತರ ಮುಂದುವರಿದಿದೆ. ಗುಂಡಿಗೆ ಬಿದ್ದ ಬೈಕ್ ಸವಾರ ಆಸ್ಪತ್ರೆ ಸೇರಿ ಕೋಮಾದಲ್ಲಿದ್ದಾರೆ, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಆತನ ಪತ್ನಿ ಚಿಕಿತ್ಸೆ ವೆಚ್ಚಕ್ಕಾಗಿ ಪರದಾಡುತ್ತಿದ್ದಾರೆ   ಇನ್ನೊಂದು ಕಡೆ ಬಿಬಿಎಂಪಿ ಅಧಿಕಾರಿಗಳು ಮಾತ್ರ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ.
 

ಬೆಂಗಳೂರು (ನ.5): ರಾಜಧಾನಿ ಬೆಂಗಳೂರಿನಲ್ಲಿ ಗುಂಡಿಗಳ ಅವಾಂತರ ಮುಂದುವರಿದಿದ್ದರೆ, ಎಮ್ಮೆ ಚರ್ಮದ ಅಧಿಕಾರಿಗಳು ಅದಕ್ಕೂ ತಮಗೂ ಸಂಬಂಧವಿಲ್ಲ ಎನ್ನುವಂತೆ ಕುಳಿತಿದ್ದಾರೆ. ಗುಂಡಿಗೆ ಬಿದ್ದ ಬೈಕ್‌ ಸವಾರ ಸಂದೀಪ್‌ ಕೋಮಾಗೆ ಜಾರಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಂದೆಡೆ ಆತನ ಪತ್ನಿ ಚಿಕಿತ್ಸೆ ವೆಚ್ಚಕ್ಕಾಗಿ ಪರದಾಟ ನಡೆಸುತ್ತಿದ್ದರೆ, ಇನ್ನೊಂಡೆ ಬಿಬಿಎಂಪಿ ಅಧಿಕಾರಿಗಳು ಮಾತ್ರ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕಳೆದ ಮಂಗಳವಾರ ಕ್ರಿಕೆಟ್‌ ಆಟ ಮುಗಿಸಿ ವಾಪಸಾಗುವ ವೇಳೆ, ಜಾಲಹಳ್ಳಿಯ ಗಂಗಮ್ಮ ರಸ್ತೆಯಲ್ಲಿ ಸಂದೀಪ್‌ ಗುಂಡಿಗೆ ಬಿದ್ದಿದ್ದರು. ಈ ವೇಳೆ ಅವರ ತಲೆಗೆ ಗಂಭೀರ ಗಾಯವಾಗಿತ್ತು.

ಬೆಂಗಳೂರು: ಇಂದು ಮಧ್ಯಾಹ್ನ 12 ರೊಳಗೆ ರಸ್ತೆ ಗುಂಡಿ ಮುಚ್ಚಿ..!

ಈ ಬಗ್ಗೆ ಸುವರ್ಣನ್ಯೂಸ್‌ಗೆ ಸಂದೀಪ್‌ ಪತ್ನಿ ಸೀಮಾ ಪ್ರತಿಕ್ರಿಯೆ ನೀಡಿದ್ದು,  7 ವರ್ಷದ ಮಗು ನಮಗಿದೆ. ಬಿಬಿಎಂಪಿ ತಪ್ಪಿಗೆ ನಮಗೇಕೆ ಶಿಕ್ಷೆ. ನನ್ನ ಗಂಡ ಕೋಮಾದಲ್ಲಿರೋದಕ್ಕೆ ಬಿಬಿಎಂಪಿಯೇ ಕಾರಣ. ಆಸ್ಪತ್ರೆಗೆ ಕಟ್ಟೋದಕ್ಕೆ ನಮ್ಮ ಬಳಿ ಹಣ ಕೂಡ ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more