ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ; ಎಸ್‌ಐಟಿ ವಿಚಾರಣೆಗೆ ಕರೆದರೆ ಆತ್ಮಹತ್ಯೆ ಮಾಡಿಕೊಳ್ತೀವಿ ಎಂದ ಸಂತ್ರಸ್ತೆಯರು

ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ; ಎಸ್‌ಐಟಿ ವಿಚಾರಣೆಗೆ ಕರೆದರೆ ಆತ್ಮಹತ್ಯೆ ಮಾಡಿಕೊಳ್ತೀವಿ ಎಂದ ಸಂತ್ರಸ್ತೆಯರು

Published : May 01, 2024, 09:18 PM IST

ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದಲ್ಲಿರುವ ಸಂತ್ರಸ್ತ ಮಹಿಳೆಯರು ತಮ್ಮನ್ನು ಎಸ್‌ಐಟಿ ತಂಡದಿಂದ ವಿಚಾರಣೆಗೆ ಕರೆದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಬೆಂಗಳೂರು (ಮೇ 01): ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋದಲ್ಲಿರುವ ಮಹಿಳೆಯರನ್ನು ಎಸ್‌ಯಟಿ ತಂಡದಿಂದ ಕರೆತಂದು ಹೇಳಿಕೆ ಪಡೆಯಲು ಮುಂದಾಗಿದೆ. ಆದರೆ, ಸಂತ್ರಸ್ತ ಮಹಿಳೆಯರು ನಾವು ಹೇಳಿಕೆ ಕೊಡುವುದಿಲ್ಲ. ನಮ್ಮನ್ನು ಮತ್ತೊಮ್ಮೆ ವಿಚಾರಣೆ ಅಥವಾ ತನಿಖೆಗೆ ಕರೆದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋದಲ್ಲಿರುವ ಸಂತ್ರಸ್ತ 10 ಮಹಿಳೆಯರನ್ನು ಎಸ್‌ಐಟಿ ತಂಡದಿಂದ ಹುಡುಕಿ ವಿಚಾರಣೆಗೆ ಕರೆದು ತರಲಾಗಿದೆ. ಆದರೆ, ಎಸ್‌ಐಟಿ ಹಲವು ಸಂತ್ರಸ್ತ ಮಹಿಳೆಯರನ್ನು ಕರೆದುತಂದು ಪ್ರಜ್ವಲ್ ರೇವಣ್ಣ ಅವರಿಂದ ಕಿರುಕುಳ ನಿಡಲಾದ ಬಗ್ಗೆ ಹೇಳಿಕೆ ಪಡೆಯಲು ಪ್ರಯತ್ನಿಸಿದ್ದಾರೆ. ಆದರೆ, ಯಾವುದೇ ಸಂತ್ರಸ್ತ ಮಹಿಳೆಯರು ಎಸ್‌ಐಟಿ ತಂಡದ ಮುಂದೆ ಯಾರೊಬ್ಬರೂ ಹೇಳಿಕೆ ಕೊಡಲು ಮುಂದಾಗಿಲ್ಲ. ಇನ್ನು ನಾವು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಯಾವುದೇ ದೂರು ದಾಖಲಿಸಿಲ್ಲ. ಆದರೂ ನಮ್ಮನ್ನು ನೀವು ಯಾಕೆ ಕರೆದುಕೊಂಡು ಬಂದು ವಿಚಾರಣೆ ಮಾಡುತ್ತಿದ್ದೀರಿ ಎಂದು ಆಕ್ರೋಶ ಹೊರಹಾಕಿದ್ದಾರೆ. ನೀವೇನಾದರೂ ನಮ್ಮನ್ನು ಬಲವಂತವಾಗಿ ಕರೆದುಕೊಂಡು ಬಂದು ವಿಚಾರಣೆಗೆ ಒಳಪಡಿಸುವುದಕ್ಕೆ ಮುಂದಾದದಲ್ಲಿ ನಾವು ಆತ್ಮಹತ್ಯೆಯ ದಾರಿಯನ್ನು ಹಿಡಿಯಬೇಕಾಗುತ್ತದೆ ಎಂದು ಹೇಳಿದ್ದಾರೆ. ಇದರಿಂದ ಸಂತ್ರಸ್ತ ಮಹಿಳೆಯರಿಂದ ಎಸ್‌ಐಟಿ ತಂಡವು ಪ್ರಜ್ವಲ್‌ ರೇವಣ್ಣ ವಿರುದ್ಧ ಯಾವುದೇ ದೂರು ಅಥವಾ ಹೇಳಿಕೆ ಪಡೆಯುವಲ್ಲಿ ವಿಫಲವಾಗಿದೆ.

ಸಂಸದ ಪ್ರಜ್ವಲ್ ರೇವಣ್ಣರನ್ನು ಅಶ್ಲೀಲ ವಿಡಿಯೋ ಕೇಸ್‌ನಲ್ಲಿ ಬಂಧಿಸಲು ಸಾಧ್ಯವಿಲ್ಲ; ವಕೀಲ ಸುಧನ್ವ ಮಾಹಿತಿ

ದೂರುದಾರ ಮಹಿಳೆಯಿಂದ ಹೇಳಿಕೆ: ಇನ್ನು ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಹೆಚ್.ಡಿ. ರೇವಣ್ಣ ಅವರ ವಿರುದ್ಧ ಹೊಳೆನರಸೀಪುರದಲ್ಲಿ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಿಸಿದ ಮಹಿಳೆ ಮಾತ್ರ ತನ್ನ ಮೇಲಿನ ದೌರ್ಜನ್ಯದ ಬಗ್ಗೆ ಹೇಳಿಕೆ ನೀಡಿದ್ದಾರೆ. ಆದರೆ, ಇವರು 5 ವರ್ಷದ ನಂತರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದು, ಪೊಲೀಸರಿಗೆ ಕಠಿಣ ಕ್ರಮ ಕೈಗೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more