ಪ್ರವೀಣ್ ಅಂತಿಮ ಮೆರವಣಿಗೆ ವೇಳೆ ಲಾಠಿ ಚಾರ್ಜ್: ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಸರ್ಕಾರ

Jul 29, 2022, 4:12 PM IST

ಪ್ರವೀಣ್ ಅಂತಿಮ ಮೆರವಣಿಗೆ ವೇಳೆ ಲಾಠಿ ಚಾರ್ಜ್ ಮಾಡಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ಡ್ಯಾಮೇಜ್ ಕಂಟ್ರೋಲ್‌ಗೆ ಸರ್ಕಾರ ಮುಂದಾಗಿದೆ. ಆರ್‌ಎಸ್‌ಎಸ್ ಕಾರ್ಯಕರ್ತ ರಮೇಶ್ ಮನೆಗೆ ಸಚಿವ ಅಂಗಾರ ಭೇಟಿ ನೀಡಿದ್ದಾರೆ. ರಮೇಶ್ ಆರೋಗ್ಯ ಬಗ್ಗೆ ವಿಚಾರಿಸಿದ್ದಾರೆ. 

ಪಾಝಿಲ್ ಹತ್ಯೆ: ತನಿಖೆಯಲ್ಲಿ ಲವ್ ಅಫೇರ್ ಅಂಶ ಕಂಡು ಬಂದಿಲ್ಲ: ಮಂಗಳೂರು ಕಮಿಷನರ್ ಶಶಿಕುಮಾರ್ ಸ್ಪಷ್ಟನೆ

ಪ್ರವೀಣ್‌ ಪಾರ್ಥಿವ ಶರೀರದ ಮೆರವಣಿಗೆ, ಅಂತಿಮ ದರ್ಶನ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದಲ್ಲದೆ, ಸರ್ಕಾರಿ ಬಸ್ಸೊಂದರ ಗಾಜಿಗೂ ಹಾನಿ ಮಾಡಿದ್ದರು. ದ್ವಿಚಕ್ರ ವಾಹನವೊಂದನ್ನು ಪುಡಿ ಪುಡಿ ಮಾಡಿದ್ದು, ಉದ್ರಿಕ್ತರ ಗುಂಪನ್ನು ನಿಯಂತ್ರಣ ಮಾಡಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಆರ್‌ಎಸ್‌ಎಸ್‌ ಕಾರ್ಯಕರ್ತ ರಮೇಶ್‌ ಕೂಡಾ ಗಾಯಗೊಂಡಿದ್ದರು.