8 ಗಂಟೆ ಅಲೆದರೂ ಗರ್ಭಿಣಿಗೆ ಸಿಗಲಿಲ್ಲ ಚಿಕಿತ್ಸೆ; ಹೊಟ್ಟೆಯಲ್ಲೇ ಮಗು ಸಾವು

8 ಗಂಟೆ ಅಲೆದರೂ ಗರ್ಭಿಣಿಗೆ ಸಿಗಲಿಲ್ಲ ಚಿಕಿತ್ಸೆ; ಹೊಟ್ಟೆಯಲ್ಲೇ ಮಗು ಸಾವು

Suvarna News   | Asianet News
Published : Jul 20, 2020, 03:09 PM IST

ಕೋವಿಡ್‌ಯೇತರ ರೋಗಿಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುತ್ತಿದ್ದು ರಾತ್ರಿಯೆಲ್ಲಾ ಸುತ್ತಾಡಿದರೂ ಗರ್ಭಿಣಿಗೆ ಚಿಕಿತ್ಸೆ ಸಿಗದೇ ಪರದಾಡಿದ್ದಾರೆ. ಶ್ರೀರಾಂಪುರ ನಿವಾಸಿಯಾಗಿರುವ ಗರ್ಭಿಣಿ ಚಿಕಿತ್ಸೆಗಾಗಿ 8 ಗಂಟೆ ಆಟೋದಲ್ಲಿ ಅಲೆದಾಡಿದ್ದಾರೆ. 

ಬೆಂಗಳೂರು (ಜು. 20): ಕೋವಿಡ್‌ಯೇತರ ರೋಗಿಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುತ್ತಿದ್ದು ರಾತ್ರಿಯೆಲ್ಲಾ ಸುತ್ತಾಡಿದರೂ ಗರ್ಭಿಣಿಗೆ ಚಿಕಿತ್ಸೆ ಸಿಗದೇ ಪರದಾಡಿದ್ದಾರೆ. 

ಶ್ರೀರಾಂಪುರ ನಿವಾಸಿಯಾಗಿರುವ ಗರ್ಭಿಣಿ ಚಿಕಿತ್ಸೆಗಾಗಿ 8 ಗಂಟೆ ಆಟೋದಲ್ಲಿ ಅಲೆದಾಡಿದ್ದಾರೆ. ವಿಕ್ಟೋರಿಯಾ, ವಾಣಿವಿಲಾಸ ಆಸ್ಪತ್ರೆಗಳಿಗೆ ಹೋದರೂ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಕೊನೆಗೆ ಆಟೋದಲ್ಲಿ ಹೆರಿಗೆಯಾಗಿದ್ದು  ಮಗು ಮಾತ್ರ ಬದುಕುಳಿದಿಲ್ಲ.  ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿದೆ. ಅಧಿಕಾರಿಗಳು ಸರಿಯಾದ ವ್ಯವಸ್ಥೆ ಕಲ್ಪಿಸುವಲ್ಲಿ ಪದೇ ಪದೇ ವಿಫಲರಾಗುತ್ತಿದ್ದಾರೆ. 

ಒಂದೆಡೆ ಸಿಎಂ, ಆರೋಗ್ಯ ಸಚಿವರು ಆಸ್ಪತ್ರೆಗಳಲ್ಲಿ ಬೆಡ್‌ ವ್ಯವಸ್ಥೆ ಮಾಡಿದ್ದೇವೆ. ಯಾರಿಗೂ ತೊಂದರೆಯಾಗುವುದಿಲ್ಲ. ಆಸ್ಪತ್ರೆಗಳಿಗೂ ಸೂಚಿಸಿದ್ದೇವೆ ಎನ್ನುತ್ತಾರೆ. ಇನ್ನೊಂದು ಕಡೆ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ನಿಜಕ್ಕೂ ಸರ್ಕಾರ, ಸಂಬಂಧಪಟ್ಟ ಅಧಿಕಾರಿಗಳು ಏನ್ಮಾಡ್ತಿದ್ದಾರೆ ಎಂಬುದು ಮಾತ್ರ ಬಗೆಹರಿಯುತ್ತಿಲ್ಲ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?