ರಾಯರ ಆರಾಧನಾ ಮಹೋತ್ಸವಕ್ಕೆ ಕೌಂಟ್‌ಡೌನ್‌: ಈ ಬಾರಿ ಭಕ್ತರಿಗೆ ಪುಣ್ಯ ಸ್ನಾನದ್ದೇ ಟೆನ್ಷನ್ !

ರಾಯರ ಆರಾಧನಾ ಮಹೋತ್ಸವಕ್ಕೆ ಕೌಂಟ್‌ಡೌನ್‌: ಈ ಬಾರಿ ಭಕ್ತರಿಗೆ ಪುಣ್ಯ ಸ್ನಾನದ್ದೇ ಟೆನ್ಷನ್ !

Published : Aug 22, 2023, 10:36 AM IST

ಕಲಿಯುಗದ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವಕ್ಕಾಗಿ ಮಂತ್ರಾಲಯ ಮಠದಲ್ಲಿ ಸಕಲ ಸಿದ್ಧತೆಗಳು ನಡೆದಿವೆ. ಇದೇ ಆಗಸ್ಟ್ 29 ರಿಂದ ಸೆಪ್ಟೆಂಬರ್ 4ರವರೆಗೆ ರಾಯರ ಆರಾಧನೆ ಮಹೋತ್ಸವ ನಡೆಯಲಿದ್ದು, ಸಪ್ತರಾತ್ರೋತ್ಸವ ಕಾರ್ಯಕ್ರಮಕ್ಕಾಗಿ ಶ್ರೀಮಠ ಸಜ್ಜಾಗುತ್ತಿದೆ. ಆದ್ರೆ ಪ್ರತಿ ವರ್ಷ  ಆರಾಧನೆಗೆ ಬರುವ ಭಕ್ತರಿಗೆ ಈ ವರ್ಷ ನಿರಾಸೆ ಆಗುವ ಸಾಧ್ಯತೆ ಇದೆ. 

ಗುರು ರಾಘವೇಂದ್ರ ಕೋಟ್ಯಂತರ ಭಕ್ತರ ಆರಾಧ ದೈವ. ನಿತ್ಯವೂ ಸಾವಿರಾರು ಭಕ್ತರು ಮಂತ್ರಾಲಯಕ್ಕೆ ಹರಿದು ಬರ್ತಾರೆ. ಇನ್ನು  ಆರಾಧನಾ ಮಹೋತ್ಸವಕ್ಕಂತೂ(Aradhana Mahotsav) ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಈ ಬಾರಿಯೂ ಆರಾಧನಾ ಮಹೋತ್ಸವಕ್ಕೆ ಮಂತ್ರಾಲಯದಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ. ಆಗಸ್ಟ್ 29ರಿಂದ ಸೆಪ್ಟೆಂಬರ್‌ವವರೆಗೆ ರಾಯರ 352ನೇ ಆರಾಧನಾ ಮಹೋತ್ಸವ ನಡೆಯಲಿದೆ. ಏಳು ದಿನಗಳ ಕಾಲ ನಡೆಯುವ ಆರಾಧನಾ ಮಹೋತ್ಸವದಲ್ಲಿ ಮಠದಲ್ಲಿ ನಿತ್ಯವೂ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಮೇಳೈಸಲಿದೆ. ಆದರೆ  ಈ ಬಾರಿ ಮಂತ್ರಾಲಯಕ್ಕೆ(Mantralayam) ಬರುವ ಭಕ್ತರಿಗೆ ಪುಣ್ಯ ಸ್ನಾನದ್ದೇ ಟೆನ್ಷನ್. ಯಾಕಂದ್ರೆ ತುಂಗಭದ್ರಾ ನದಿಯಲ್ಲಿ ನೀರಿಲ್ಲದೇ ಕಲ್ಲು ಬಂಡೆಗಳೇ ಕಾಣಿಸುತ್ತಿವೆ. ರಾಯರ ದರ್ಶನಕ್ಕೆ ಬರುವ ಭಕ್ತರು ಮೊದಲು ತುಂಗಭದ್ರಾ(Tungabhadra) ನದಿಯಲ್ಲಿ ಪುಣ್ಯಸ್ನಾನ ಮಾಡಿ ನಂತ್ರ ರಾಯರ ದರ್ಶನ ಪಡೆಯೋದು ಪ್ರತೀತಿ. ಆದ್ರೆ ಮಂತ್ರಾಲಯದ ರಾಯರ ಮಠದ ಪಕ್ಕ ಹರಿಯುವ ತುಂಗಭದ್ರೆಯ ಒಡಲು ಈ ಬಾರಿ ಸಂಪೂರ್ಣ ಖಾಲಿಯಾಗಿದೆ. ಪುಣ್ಯಸ್ನಾನಕ್ಕೂ ನೀರಿನ ಸಮಸ್ಯೆ ಎದುರಾಗಿದೆ. ಇನ್ನು ಮಠದ ಆಡಳಿತ ಮಂಡಳಿ ಭಕ್ತರಿಗೆ ಸಮಸ್ಯೆ ಆಗದಂತೆ ನದಿ ದಡದಲ್ಲಿ ಸ್ನಾನಘಟ್ಟಗಳನ್ನ ನಿರ್ಮಿಸಿದೆ. ಜೊತೆಗೆ ತುಂಗಭದ್ರಾ ನದಿಗೆ ಹೆಚ್ಚುವರಿ ನೀರು ಹರಿಸುವಂತೆ ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಲಾಗುವುದು ಅಂತ ಶ್ರೀಗಳು ತಿಳಿಸಿದ್ದಾರೆ.

ಇದನ್ನೂ ವೀಕ್ಷಿಸಿ: 'ಟೋಬಿ' ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ: ವರಮಹಾಲಕ್ಷ್ಮಿ ಹಬ್ಬದಂದು ಬೆಳ್ಳಿತೆರೆಗೆ ಎಂಟ್ರಿ !

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!