ರಾಯರ ಆರಾಧನಾ ಮಹೋತ್ಸವಕ್ಕೆ ಕೌಂಟ್‌ಡೌನ್‌: ಈ ಬಾರಿ ಭಕ್ತರಿಗೆ ಪುಣ್ಯ ಸ್ನಾನದ್ದೇ ಟೆನ್ಷನ್ !

ರಾಯರ ಆರಾಧನಾ ಮಹೋತ್ಸವಕ್ಕೆ ಕೌಂಟ್‌ಡೌನ್‌: ಈ ಬಾರಿ ಭಕ್ತರಿಗೆ ಪುಣ್ಯ ಸ್ನಾನದ್ದೇ ಟೆನ್ಷನ್ !

Published : Aug 22, 2023, 10:36 AM IST

ಕಲಿಯುಗದ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವಕ್ಕಾಗಿ ಮಂತ್ರಾಲಯ ಮಠದಲ್ಲಿ ಸಕಲ ಸಿದ್ಧತೆಗಳು ನಡೆದಿವೆ. ಇದೇ ಆಗಸ್ಟ್ 29 ರಿಂದ ಸೆಪ್ಟೆಂಬರ್ 4ರವರೆಗೆ ರಾಯರ ಆರಾಧನೆ ಮಹೋತ್ಸವ ನಡೆಯಲಿದ್ದು, ಸಪ್ತರಾತ್ರೋತ್ಸವ ಕಾರ್ಯಕ್ರಮಕ್ಕಾಗಿ ಶ್ರೀಮಠ ಸಜ್ಜಾಗುತ್ತಿದೆ. ಆದ್ರೆ ಪ್ರತಿ ವರ್ಷ  ಆರಾಧನೆಗೆ ಬರುವ ಭಕ್ತರಿಗೆ ಈ ವರ್ಷ ನಿರಾಸೆ ಆಗುವ ಸಾಧ್ಯತೆ ಇದೆ. 

ಗುರು ರಾಘವೇಂದ್ರ ಕೋಟ್ಯಂತರ ಭಕ್ತರ ಆರಾಧ ದೈವ. ನಿತ್ಯವೂ ಸಾವಿರಾರು ಭಕ್ತರು ಮಂತ್ರಾಲಯಕ್ಕೆ ಹರಿದು ಬರ್ತಾರೆ. ಇನ್ನು  ಆರಾಧನಾ ಮಹೋತ್ಸವಕ್ಕಂತೂ(Aradhana Mahotsav) ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಈ ಬಾರಿಯೂ ಆರಾಧನಾ ಮಹೋತ್ಸವಕ್ಕೆ ಮಂತ್ರಾಲಯದಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ. ಆಗಸ್ಟ್ 29ರಿಂದ ಸೆಪ್ಟೆಂಬರ್‌ವವರೆಗೆ ರಾಯರ 352ನೇ ಆರಾಧನಾ ಮಹೋತ್ಸವ ನಡೆಯಲಿದೆ. ಏಳು ದಿನಗಳ ಕಾಲ ನಡೆಯುವ ಆರಾಧನಾ ಮಹೋತ್ಸವದಲ್ಲಿ ಮಠದಲ್ಲಿ ನಿತ್ಯವೂ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಮೇಳೈಸಲಿದೆ. ಆದರೆ  ಈ ಬಾರಿ ಮಂತ್ರಾಲಯಕ್ಕೆ(Mantralayam) ಬರುವ ಭಕ್ತರಿಗೆ ಪುಣ್ಯ ಸ್ನಾನದ್ದೇ ಟೆನ್ಷನ್. ಯಾಕಂದ್ರೆ ತುಂಗಭದ್ರಾ ನದಿಯಲ್ಲಿ ನೀರಿಲ್ಲದೇ ಕಲ್ಲು ಬಂಡೆಗಳೇ ಕಾಣಿಸುತ್ತಿವೆ. ರಾಯರ ದರ್ಶನಕ್ಕೆ ಬರುವ ಭಕ್ತರು ಮೊದಲು ತುಂಗಭದ್ರಾ(Tungabhadra) ನದಿಯಲ್ಲಿ ಪುಣ್ಯಸ್ನಾನ ಮಾಡಿ ನಂತ್ರ ರಾಯರ ದರ್ಶನ ಪಡೆಯೋದು ಪ್ರತೀತಿ. ಆದ್ರೆ ಮಂತ್ರಾಲಯದ ರಾಯರ ಮಠದ ಪಕ್ಕ ಹರಿಯುವ ತುಂಗಭದ್ರೆಯ ಒಡಲು ಈ ಬಾರಿ ಸಂಪೂರ್ಣ ಖಾಲಿಯಾಗಿದೆ. ಪುಣ್ಯಸ್ನಾನಕ್ಕೂ ನೀರಿನ ಸಮಸ್ಯೆ ಎದುರಾಗಿದೆ. ಇನ್ನು ಮಠದ ಆಡಳಿತ ಮಂಡಳಿ ಭಕ್ತರಿಗೆ ಸಮಸ್ಯೆ ಆಗದಂತೆ ನದಿ ದಡದಲ್ಲಿ ಸ್ನಾನಘಟ್ಟಗಳನ್ನ ನಿರ್ಮಿಸಿದೆ. ಜೊತೆಗೆ ತುಂಗಭದ್ರಾ ನದಿಗೆ ಹೆಚ್ಚುವರಿ ನೀರು ಹರಿಸುವಂತೆ ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಲಾಗುವುದು ಅಂತ ಶ್ರೀಗಳು ತಿಳಿಸಿದ್ದಾರೆ.

ಇದನ್ನೂ ವೀಕ್ಷಿಸಿ: 'ಟೋಬಿ' ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ: ವರಮಹಾಲಕ್ಷ್ಮಿ ಹಬ್ಬದಂದು ಬೆಳ್ಳಿತೆರೆಗೆ ಎಂಟ್ರಿ !

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!