District Incharge: ಪಟ್ಟಿ ಬದಲಾವಣೆಗೆ ಹೆಚ್ಚಿದ ಒತ್ತಡ, ಸಾಧ್ಯವೇ ಇಲ್ಲ ಎಂದ ಸಿಎಂ

District Incharge: ಪಟ್ಟಿ ಬದಲಾವಣೆಗೆ ಹೆಚ್ಚಿದ ಒತ್ತಡ, ಸಾಧ್ಯವೇ ಇಲ್ಲ ಎಂದ ಸಿಎಂ

Published : Jan 25, 2022, 03:48 PM ISTUpdated : Jan 25, 2022, 05:53 PM IST

 ಜಿಲ್ಲಾ ಉಸ್ತುವಾರಿ (District Incharge) ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ, ಸಚಿವರ ಅಸಮಾಧಾನ ಹೊರ ಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. 

ಬೆಂಗಳೂರು (ಜ. 25): ಜಿಲ್ಲಾ ಉಸ್ತುವಾರಿ (District Incharge) ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ, ಸಚಿವರ ಅಸಮಾಧಾನ ಹೊರ ಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಚಿವರಾದ ನಾರಾಯಣ ಗೌಡ, ಕೆ ಎಸ್ ಈಶ್ವರಪ್ಪ, ಶಿವರಾಂ ಹೆಬ್ಬಾರ್, ಪ್ರಭು ಚವ್ಹಾಣ್ ಸೇರಿದಂತೆ ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಉಸ್ತುವಾರಿ ಪಟ್ಟಿ ಬದಲಾವಣೆ ಸಾಧ್ಯವೇ ಇಲ್ಲ ಎಂದು ಸಿಎಂ ಸ್ಪಷ್ಟ ಸಂದೇಶ ನೀಡಿದ್ದಾರೆ. 

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅಸ್ತಿತಕ್ಕೆ ಬಂದು ಆರು ತಿಂಗಳು ಸಮೀಪಿಸುತ್ತಿರುವ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆದೇಶ ಹೊರಬಿದ್ದಿದ್ದು, ಎಲ್ಲ ಸಚಿವರಿಗೂ ತವರು ಜಿಲ್ಲೆ ಹೊರತುಪಡಿಸಿ ಬೇರೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

'ಬೇರೆ ಜಿಲ್ಲೆಯಲ್ಲಿ ಕೆಲಸ ಮಾಡೋದು ಅಸಾಧ್ಯ. ತುಮಕೂರು ಜಿಲ್ಲೆ (Tumakur) ಸಿಕ್ಕಿದ್ದರೆ ಚೆನ್ನಾಗಿ ಕೆಲಸ ಮಾಡಬಹುದಿತ್ತು. ತುಮಕೂರು ಜಿಲ್ಲೆಯ ಆಳ - ಅಗಲ ಚೆನ್ನಾಗಿ ಗೊತ್ತಿದೆ. ಒಳ್ಳೆಯ ಕೆಲಸ ಮಾಡಿ ಹೆಸರು ಪಡೆಯುವ ನಿರೀಕ್ಷೆ ಇತ್ತು. ಬೇರೆ ಜಿಲ್ಲೆಗೆ ಹೋಗಿ ಕೆಟ್ಟ ಹೆಸರು ಪಡೆಯುವ ಆಸೆಯಿಲ್ಲ ಎಂದು ಉಸ್ತುವಾರಿ ಕೈತಪ್ಪಿದ್ದಕ್ಕೆ ಸಚಿವ ಮಾಧುಸ್ವಾಮಿ (Madhuswamy) ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more