District Incharge: ಪಟ್ಟಿ ಬದಲಾವಣೆಗೆ ಹೆಚ್ಚಿದ ಒತ್ತಡ, ಸಾಧ್ಯವೇ ಇಲ್ಲ ಎಂದ ಸಿಎಂ

District Incharge: ಪಟ್ಟಿ ಬದಲಾವಣೆಗೆ ಹೆಚ್ಚಿದ ಒತ್ತಡ, ಸಾಧ್ಯವೇ ಇಲ್ಲ ಎಂದ ಸಿಎಂ

Published : Jan 25, 2022, 03:48 PM ISTUpdated : Jan 25, 2022, 05:53 PM IST

 ಜಿಲ್ಲಾ ಉಸ್ತುವಾರಿ (District Incharge) ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ, ಸಚಿವರ ಅಸಮಾಧಾನ ಹೊರ ಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. 

ಬೆಂಗಳೂರು (ಜ. 25): ಜಿಲ್ಲಾ ಉಸ್ತುವಾರಿ (District Incharge) ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ, ಸಚಿವರ ಅಸಮಾಧಾನ ಹೊರ ಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಚಿವರಾದ ನಾರಾಯಣ ಗೌಡ, ಕೆ ಎಸ್ ಈಶ್ವರಪ್ಪ, ಶಿವರಾಂ ಹೆಬ್ಬಾರ್, ಪ್ರಭು ಚವ್ಹಾಣ್ ಸೇರಿದಂತೆ ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಉಸ್ತುವಾರಿ ಪಟ್ಟಿ ಬದಲಾವಣೆ ಸಾಧ್ಯವೇ ಇಲ್ಲ ಎಂದು ಸಿಎಂ ಸ್ಪಷ್ಟ ಸಂದೇಶ ನೀಡಿದ್ದಾರೆ. 

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅಸ್ತಿತಕ್ಕೆ ಬಂದು ಆರು ತಿಂಗಳು ಸಮೀಪಿಸುತ್ತಿರುವ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆದೇಶ ಹೊರಬಿದ್ದಿದ್ದು, ಎಲ್ಲ ಸಚಿವರಿಗೂ ತವರು ಜಿಲ್ಲೆ ಹೊರತುಪಡಿಸಿ ಬೇರೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

'ಬೇರೆ ಜಿಲ್ಲೆಯಲ್ಲಿ ಕೆಲಸ ಮಾಡೋದು ಅಸಾಧ್ಯ. ತುಮಕೂರು ಜಿಲ್ಲೆ (Tumakur) ಸಿಕ್ಕಿದ್ದರೆ ಚೆನ್ನಾಗಿ ಕೆಲಸ ಮಾಡಬಹುದಿತ್ತು. ತುಮಕೂರು ಜಿಲ್ಲೆಯ ಆಳ - ಅಗಲ ಚೆನ್ನಾಗಿ ಗೊತ್ತಿದೆ. ಒಳ್ಳೆಯ ಕೆಲಸ ಮಾಡಿ ಹೆಸರು ಪಡೆಯುವ ನಿರೀಕ್ಷೆ ಇತ್ತು. ಬೇರೆ ಜಿಲ್ಲೆಗೆ ಹೋಗಿ ಕೆಟ್ಟ ಹೆಸರು ಪಡೆಯುವ ಆಸೆಯಿಲ್ಲ ಎಂದು ಉಸ್ತುವಾರಿ ಕೈತಪ್ಪಿದ್ದಕ್ಕೆ ಸಚಿವ ಮಾಧುಸ್ವಾಮಿ (Madhuswamy) ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more