District Incharge: ಪಟ್ಟಿ ಬದಲಾವಣೆಗೆ ಹೆಚ್ಚಿದ ಒತ್ತಡ, ಸಾಧ್ಯವೇ ಇಲ್ಲ ಎಂದ ಸಿಎಂ

District Incharge: ಪಟ್ಟಿ ಬದಲಾವಣೆಗೆ ಹೆಚ್ಚಿದ ಒತ್ತಡ, ಸಾಧ್ಯವೇ ಇಲ್ಲ ಎಂದ ಸಿಎಂ

Published : Jan 25, 2022, 03:48 PM ISTUpdated : Jan 25, 2022, 05:53 PM IST

 ಜಿಲ್ಲಾ ಉಸ್ತುವಾರಿ (District Incharge) ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ, ಸಚಿವರ ಅಸಮಾಧಾನ ಹೊರ ಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. 

ಬೆಂಗಳೂರು (ಜ. 25): ಜಿಲ್ಲಾ ಉಸ್ತುವಾರಿ (District Incharge) ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ, ಸಚಿವರ ಅಸಮಾಧಾನ ಹೊರ ಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಚಿವರಾದ ನಾರಾಯಣ ಗೌಡ, ಕೆ ಎಸ್ ಈಶ್ವರಪ್ಪ, ಶಿವರಾಂ ಹೆಬ್ಬಾರ್, ಪ್ರಭು ಚವ್ಹಾಣ್ ಸೇರಿದಂತೆ ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಉಸ್ತುವಾರಿ ಪಟ್ಟಿ ಬದಲಾವಣೆ ಸಾಧ್ಯವೇ ಇಲ್ಲ ಎಂದು ಸಿಎಂ ಸ್ಪಷ್ಟ ಸಂದೇಶ ನೀಡಿದ್ದಾರೆ. 

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅಸ್ತಿತಕ್ಕೆ ಬಂದು ಆರು ತಿಂಗಳು ಸಮೀಪಿಸುತ್ತಿರುವ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆದೇಶ ಹೊರಬಿದ್ದಿದ್ದು, ಎಲ್ಲ ಸಚಿವರಿಗೂ ತವರು ಜಿಲ್ಲೆ ಹೊರತುಪಡಿಸಿ ಬೇರೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

'ಬೇರೆ ಜಿಲ್ಲೆಯಲ್ಲಿ ಕೆಲಸ ಮಾಡೋದು ಅಸಾಧ್ಯ. ತುಮಕೂರು ಜಿಲ್ಲೆ (Tumakur) ಸಿಕ್ಕಿದ್ದರೆ ಚೆನ್ನಾಗಿ ಕೆಲಸ ಮಾಡಬಹುದಿತ್ತು. ತುಮಕೂರು ಜಿಲ್ಲೆಯ ಆಳ - ಅಗಲ ಚೆನ್ನಾಗಿ ಗೊತ್ತಿದೆ. ಒಳ್ಳೆಯ ಕೆಲಸ ಮಾಡಿ ಹೆಸರು ಪಡೆಯುವ ನಿರೀಕ್ಷೆ ಇತ್ತು. ಬೇರೆ ಜಿಲ್ಲೆಗೆ ಹೋಗಿ ಕೆಟ್ಟ ಹೆಸರು ಪಡೆಯುವ ಆಸೆಯಿಲ್ಲ ಎಂದು ಉಸ್ತುವಾರಿ ಕೈತಪ್ಪಿದ್ದಕ್ಕೆ ಸಚಿವ ಮಾಧುಸ್ವಾಮಿ (Madhuswamy) ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more