ಆಕ್ಸಿಜನ್ ಘಟಕವನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡ ಕಲಬುರ್ಗಿ ಜಿಲ್ಲಾಡಳಿತ

May 4, 2021, 4:26 PM IST

ಬೆಂಗಳೂರು (ಮೇ. 04): ಒಂದೆಡೆ ಕಲಬುರ್ಗಿಯಲ್ಲಿ ಆಕ್ಸಿಜನ್ ಕೊರತೆಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಜಿಲ್ಲೆಯಲ್ಲಿರುವ ವಿಜಯ ಯೂನಿಟ್‌ನಿಂದ ಬೇರೆ ರಾಜ್ಯಗಳಿಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಹೊರ ಬಿದ್ದಿದೆ. ಜಿಲ್ಲಾಡಳಿತದ ಅಧಿಕಾರಿಗಳು ಯೂನಿಟ್‌ಗೆ ಭೇಟಿ ಕೊಟ್ಟು ಪರಿಶೀಲಿಸಿದ್ಧಾರೆ. ಆಕ್ಸಿಜನ್ ಯೂನಿಟನ್ನು ಜಿಲ್ಲಾಡಳಿತ ತನ್ನ ಸುಪರ್ದಿಗೆ ತೆಗೆದುಕೊಂಡಿದೆ. 

ಆಕ್ಸಿಜನ್ ಕೊರತೆ: ಸಿಎಂಗೆ ಬಿಜೆಪಿ ಹೈಕಮಾಂಡ್‌ನಿಂದ ಮಹತ್ವದ ಸೂಚನೆ!