ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನ

ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನ

Published : Apr 29, 2022, 08:44 AM ISTUpdated : Apr 29, 2022, 09:01 AM IST

ಪಿಎಸ್‌ಐ ಹಗರಣದ ಕಿಂಗ್‌ ಪಿನ್ ದಿವ್ಯಾ ಹಾಗರಗಿ ಬಂಧನವಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಅಡಗಿ ಕುಳಿತಿದ್ದರು. ಪುಣೆಯಿಂದ ಕಲಬುರಗಿಯತ್ತ ಕರೆತರಲಾಗುತ್ತಿದೆ. ದಿವ್ಯಾ ಹಾಗರಗಿ ಜೊತೆಗೆ 5 ಮೇಲ್ವಿಚಾರಕರನ್ನು ಬಂಧಿಸಲಾಗಿದೆ. 

ಬೆಂಗಳೂರು (ಏ. 29): ಪಿಎಸ್‌ಐ ಹಗರಣದ (PSI Recruitment Scam) ಕಿಂಗ್‌ ಪಿನ್ ದಿವ್ಯಾ ಹಾಗರಗಿ (Divya Hagaagi) ಬಂಧನವಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಅಡಗಿ ಕುಳಿತಿದ್ದರು. ಪುಣೆಯಿಂದ ಕಲಬುರಗಿಯತ್ತ ಕರೆತರಲಾಗುತ್ತಿದೆ. ದಿವ್ಯಾ ಹಾಗರಗಿ ಜೊತೆಗೆ 5 ಮೇಲ್ವಿಚಾರಕರನ್ನು ಬಂಧಿಸಲಾಗಿದೆ. 

2021ರ ಅ.3ರಂದು 545 ಪಿಎಸ್‌ಐ ಹುದ್ದೆಗಳ ನೇಮಕಾತಿಗಾಗಿ ರಾಜ್ಯಾದ್ಯಂತ 92 ಕೇಂದ್ರಗಳಲ್ಲಿ ಒಟ್ಟು 54,104 ಅಭ್ಯರ್ಥಿಗಳು ಪರೀಕ್ಷೆಗೆ ಬರೆದಿದ್ದರು. ಇದುವರೆಗಿನ ತನಿಖೆಯಲ್ಲಿ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದಲ್ಲೇ 7 ಅಕ್ರಮ ನಡೆದಿರೋದು ಖಚಿತವಾಗಿದೆ ಎಂದು ಸಿಐಡಿ ಮೂಲಗಳು ಖಚಿತಪಡಿಸಿವೆ. ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 11 ಪಿಎಸ್‌ಐ ಪರೀಕ್ಷಾ ಕೇಂದ್ರಗಳಿದ್ದವು, ಜಿಲ್ಲೆಯಿಂದ 92 ಅಭ್ಯರ್ಥಿಗಳು ನೇಮಕ ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಈ ಪೈಕಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರ ಪೈಕಿ 11 ಅಭ್ಯರ್ಥಿಗಳು ಆಯ್ಕೆ ಯಾಗಿದ್ದಾರೆ.

ಇದರಲ್ಲಿ 7 ಅಭ್ಯರ್ಥಿಗಳು ಅಕ್ರಮದ ಹಾದಿಯಿಂದ ನೇಮಕ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿರೋದು ಸಿಐಡಿ ತನಿಖೆಯಿಂದ ಬಯಲಾಗಿದೆ. ಇನ್ನುಳಿದ ನಾಲ್ವರಲ್ಲಿ ಇಬ್ಬರ ವಿಚಾರಣೆ ನಡೆದಿದೆ. ಇನ್ನಿಬ್ಬರು ನಾಪತ್ತೆಯಾಗಿದ್ದಾರೆ. ಈ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿವರೆಗೆ 7 ಜನ ಅಭ್ಯರ್ಥಿಗಳು ಸೇರಿ ಒಟ್ಟು 16 ಜನರ ಬಂಧನವಾಗಿದೆ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?