ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನ

ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನ

Published : Apr 29, 2022, 08:44 AM ISTUpdated : Apr 29, 2022, 09:01 AM IST

ಪಿಎಸ್‌ಐ ಹಗರಣದ ಕಿಂಗ್‌ ಪಿನ್ ದಿವ್ಯಾ ಹಾಗರಗಿ ಬಂಧನವಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಅಡಗಿ ಕುಳಿತಿದ್ದರು. ಪುಣೆಯಿಂದ ಕಲಬುರಗಿಯತ್ತ ಕರೆತರಲಾಗುತ್ತಿದೆ. ದಿವ್ಯಾ ಹಾಗರಗಿ ಜೊತೆಗೆ 5 ಮೇಲ್ವಿಚಾರಕರನ್ನು ಬಂಧಿಸಲಾಗಿದೆ. 

ಬೆಂಗಳೂರು (ಏ. 29): ಪಿಎಸ್‌ಐ ಹಗರಣದ (PSI Recruitment Scam) ಕಿಂಗ್‌ ಪಿನ್ ದಿವ್ಯಾ ಹಾಗರಗಿ (Divya Hagaagi) ಬಂಧನವಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಅಡಗಿ ಕುಳಿತಿದ್ದರು. ಪುಣೆಯಿಂದ ಕಲಬುರಗಿಯತ್ತ ಕರೆತರಲಾಗುತ್ತಿದೆ. ದಿವ್ಯಾ ಹಾಗರಗಿ ಜೊತೆಗೆ 5 ಮೇಲ್ವಿಚಾರಕರನ್ನು ಬಂಧಿಸಲಾಗಿದೆ. 

2021ರ ಅ.3ರಂದು 545 ಪಿಎಸ್‌ಐ ಹುದ್ದೆಗಳ ನೇಮಕಾತಿಗಾಗಿ ರಾಜ್ಯಾದ್ಯಂತ 92 ಕೇಂದ್ರಗಳಲ್ಲಿ ಒಟ್ಟು 54,104 ಅಭ್ಯರ್ಥಿಗಳು ಪರೀಕ್ಷೆಗೆ ಬರೆದಿದ್ದರು. ಇದುವರೆಗಿನ ತನಿಖೆಯಲ್ಲಿ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದಲ್ಲೇ 7 ಅಕ್ರಮ ನಡೆದಿರೋದು ಖಚಿತವಾಗಿದೆ ಎಂದು ಸಿಐಡಿ ಮೂಲಗಳು ಖಚಿತಪಡಿಸಿವೆ. ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 11 ಪಿಎಸ್‌ಐ ಪರೀಕ್ಷಾ ಕೇಂದ್ರಗಳಿದ್ದವು, ಜಿಲ್ಲೆಯಿಂದ 92 ಅಭ್ಯರ್ಥಿಗಳು ನೇಮಕ ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಈ ಪೈಕಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರ ಪೈಕಿ 11 ಅಭ್ಯರ್ಥಿಗಳು ಆಯ್ಕೆ ಯಾಗಿದ್ದಾರೆ.

ಇದರಲ್ಲಿ 7 ಅಭ್ಯರ್ಥಿಗಳು ಅಕ್ರಮದ ಹಾದಿಯಿಂದ ನೇಮಕ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿರೋದು ಸಿಐಡಿ ತನಿಖೆಯಿಂದ ಬಯಲಾಗಿದೆ. ಇನ್ನುಳಿದ ನಾಲ್ವರಲ್ಲಿ ಇಬ್ಬರ ವಿಚಾರಣೆ ನಡೆದಿದೆ. ಇನ್ನಿಬ್ಬರು ನಾಪತ್ತೆಯಾಗಿದ್ದಾರೆ. ಈ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿವರೆಗೆ 7 ಜನ ಅಭ್ಯರ್ಥಿಗಳು ಸೇರಿ ಒಟ್ಟು 16 ಜನರ ಬಂಧನವಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!