ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನ

ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನ

Published : Apr 29, 2022, 08:44 AM ISTUpdated : Apr 29, 2022, 09:01 AM IST

ಪಿಎಸ್‌ಐ ಹಗರಣದ ಕಿಂಗ್‌ ಪಿನ್ ದಿವ್ಯಾ ಹಾಗರಗಿ ಬಂಧನವಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಅಡಗಿ ಕುಳಿತಿದ್ದರು. ಪುಣೆಯಿಂದ ಕಲಬುರಗಿಯತ್ತ ಕರೆತರಲಾಗುತ್ತಿದೆ. ದಿವ್ಯಾ ಹಾಗರಗಿ ಜೊತೆಗೆ 5 ಮೇಲ್ವಿಚಾರಕರನ್ನು ಬಂಧಿಸಲಾಗಿದೆ. 

ಬೆಂಗಳೂರು (ಏ. 29): ಪಿಎಸ್‌ಐ ಹಗರಣದ (PSI Recruitment Scam) ಕಿಂಗ್‌ ಪಿನ್ ದಿವ್ಯಾ ಹಾಗರಗಿ (Divya Hagaagi) ಬಂಧನವಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಅಡಗಿ ಕುಳಿತಿದ್ದರು. ಪುಣೆಯಿಂದ ಕಲಬುರಗಿಯತ್ತ ಕರೆತರಲಾಗುತ್ತಿದೆ. ದಿವ್ಯಾ ಹಾಗರಗಿ ಜೊತೆಗೆ 5 ಮೇಲ್ವಿಚಾರಕರನ್ನು ಬಂಧಿಸಲಾಗಿದೆ. 

2021ರ ಅ.3ರಂದು 545 ಪಿಎಸ್‌ಐ ಹುದ್ದೆಗಳ ನೇಮಕಾತಿಗಾಗಿ ರಾಜ್ಯಾದ್ಯಂತ 92 ಕೇಂದ್ರಗಳಲ್ಲಿ ಒಟ್ಟು 54,104 ಅಭ್ಯರ್ಥಿಗಳು ಪರೀಕ್ಷೆಗೆ ಬರೆದಿದ್ದರು. ಇದುವರೆಗಿನ ತನಿಖೆಯಲ್ಲಿ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದಲ್ಲೇ 7 ಅಕ್ರಮ ನಡೆದಿರೋದು ಖಚಿತವಾಗಿದೆ ಎಂದು ಸಿಐಡಿ ಮೂಲಗಳು ಖಚಿತಪಡಿಸಿವೆ. ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 11 ಪಿಎಸ್‌ಐ ಪರೀಕ್ಷಾ ಕೇಂದ್ರಗಳಿದ್ದವು, ಜಿಲ್ಲೆಯಿಂದ 92 ಅಭ್ಯರ್ಥಿಗಳು ನೇಮಕ ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಈ ಪೈಕಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರ ಪೈಕಿ 11 ಅಭ್ಯರ್ಥಿಗಳು ಆಯ್ಕೆ ಯಾಗಿದ್ದಾರೆ.

ಇದರಲ್ಲಿ 7 ಅಭ್ಯರ್ಥಿಗಳು ಅಕ್ರಮದ ಹಾದಿಯಿಂದ ನೇಮಕ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿರೋದು ಸಿಐಡಿ ತನಿಖೆಯಿಂದ ಬಯಲಾಗಿದೆ. ಇನ್ನುಳಿದ ನಾಲ್ವರಲ್ಲಿ ಇಬ್ಬರ ವಿಚಾರಣೆ ನಡೆದಿದೆ. ಇನ್ನಿಬ್ಬರು ನಾಪತ್ತೆಯಾಗಿದ್ದಾರೆ. ಈ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿವರೆಗೆ 7 ಜನ ಅಭ್ಯರ್ಥಿಗಳು ಸೇರಿ ಒಟ್ಟು 16 ಜನರ ಬಂಧನವಾಗಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!