ಪ್ರಿಯಾಂಕ್ ಖರ್ಗೆಗೆ ನೋಟಿಸ್, ಯುಟಿ ಖಾದರ್ ಗರಂ!

ಪ್ರಿಯಾಂಕ್ ಖರ್ಗೆಗೆ ನೋಟಿಸ್, ಯುಟಿ ಖಾದರ್ ಗರಂ!

Published : Apr 25, 2022, 06:03 PM IST

ಪಿಎಸ್ಐ ನೇಮಕಾತಿ ವಿಚಾರದಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡಿರುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನ ಹಿರಿಯ ನಾಯಕ ಯುಟಿ ಖಾದರ್, ನೋಟಿಸ್ ನೀಡಿರುವ ಕ್ರಮವನ್ನು ಟೀಕಿಸಿದ್ದಾರೆ,
 

ಬೆಂಗಳೂರು (ಏ.25): ಪಿಎಸ್ಐ ನೇಮಕಾತಿ ವಿಚಾರದಲ್ಲಿ (PSI Recruitment Scam) ಕಾಂಗ್ರೆಸ್ ಶಾಸಕ (Congress MLA) ಪ್ರಿಯಾಂಕ್ ಖರ್ಗೆಗೆ (Priyank Kharge) ಸಿಐಡಿ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲಿಯೇ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ. ತನಿಖೆ ಬಿಟ್ಟು, ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡ್ತಾರೆ. ಈ ಬೆದರಿಕೆಗೆ ಕಾಂಗ್ರೆಸ್ ಬಗ್ಗೋದಿಲ್ಲ ಎಂದು ಯುಟಿ ಖಾದರ್ (UT Khader) ಹೇಳಿದ್ದಾರೆ.

ಅಧಿಕಾರಿಗಳ ಬೆಂಬಲ ಇಲ್ಲದೆ ನೇಮಕಾತಿ ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿ ಕೊಟ್ಟಿದ್ದಾರೆ.  ಈ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲವೇ, ಇದು ಗುಪ್ತಚರ ವೈಫಲ್ಯ. ಮಾಹಿತಿ ಕೊಟ್ಟವರಿಗೆ ನೋಟಿಸ್ ನೀಡುವುದು ವ್ಯವಸ್ಥೆಯೇ. ಬಿಜೆಪಿ ಸರ್ಕಾರ ಇರೋವಾಗಲೇ ಇಂಥದ್ದೆಲ್ಲ ಯಾಕಾಗುತ್ತದೆ. ಇದು ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ಯುಟಿ ಖಾದರ್ ಹೇಳಿದ್ದಾರೆ.

CID Notice: ಪ್ರಿಯಾಂಕ್ ಖರ್ಗೆ ಹಿಂದೆ ಪಕ್ಷ ಇದೆ, ಬೆದರಿಕೆಗೆ ಬಗ್ಗಲ್ಲ; ಸಿದ್ದರಾಮಯ್ಯ

ಅಧಿಕಾರಿಗಳ ಸಹಾಯವಿಲ್ಲದೆ ಇದೆಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಆದರೆ, ಸಾರ್ವಜನಿಕವಾಗಿ ಇರೋ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆಗೆ ಸರ್ಕಾರ ನೋಟಿಸ್ ಜಾರಿ ಮಾಡುತ್ತದೆ. ಸರ್ಕಾರದ ಹಿಂದಿರುವ ಉದ್ದೇಶವಾದರೂ ಏನು. ನಿರುದ್ಯೋಗ ಹಾಗೂ ಭ್ರಷ್ಟಾಚಾರದ ಕುರಿತಾಗಿ ಸರ್ಕಾರದ ವಿರುದ್ಧ ಯಾರೂ ಮಾತನಾಡಲೇಬಾರದೇ? ಎಂದು ಖಾದರ್ ಪ್ರಶ್ನೆ ಮಾಡಿದ್ದಾರೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more