ಪ್ರಿಯಾಂಕ್ ಖರ್ಗೆಗೆ ನೋಟಿಸ್, ಯುಟಿ ಖಾದರ್ ಗರಂ!

ಪ್ರಿಯಾಂಕ್ ಖರ್ಗೆಗೆ ನೋಟಿಸ್, ಯುಟಿ ಖಾದರ್ ಗರಂ!

Published : Apr 25, 2022, 06:03 PM IST

ಪಿಎಸ್ಐ ನೇಮಕಾತಿ ವಿಚಾರದಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡಿರುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನ ಹಿರಿಯ ನಾಯಕ ಯುಟಿ ಖಾದರ್, ನೋಟಿಸ್ ನೀಡಿರುವ ಕ್ರಮವನ್ನು ಟೀಕಿಸಿದ್ದಾರೆ,
 

ಬೆಂಗಳೂರು (ಏ.25): ಪಿಎಸ್ಐ ನೇಮಕಾತಿ ವಿಚಾರದಲ್ಲಿ (PSI Recruitment Scam) ಕಾಂಗ್ರೆಸ್ ಶಾಸಕ (Congress MLA) ಪ್ರಿಯಾಂಕ್ ಖರ್ಗೆಗೆ (Priyank Kharge) ಸಿಐಡಿ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲಿಯೇ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ. ತನಿಖೆ ಬಿಟ್ಟು, ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡ್ತಾರೆ. ಈ ಬೆದರಿಕೆಗೆ ಕಾಂಗ್ರೆಸ್ ಬಗ್ಗೋದಿಲ್ಲ ಎಂದು ಯುಟಿ ಖಾದರ್ (UT Khader) ಹೇಳಿದ್ದಾರೆ.

ಅಧಿಕಾರಿಗಳ ಬೆಂಬಲ ಇಲ್ಲದೆ ನೇಮಕಾತಿ ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿ ಕೊಟ್ಟಿದ್ದಾರೆ.  ಈ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲವೇ, ಇದು ಗುಪ್ತಚರ ವೈಫಲ್ಯ. ಮಾಹಿತಿ ಕೊಟ್ಟವರಿಗೆ ನೋಟಿಸ್ ನೀಡುವುದು ವ್ಯವಸ್ಥೆಯೇ. ಬಿಜೆಪಿ ಸರ್ಕಾರ ಇರೋವಾಗಲೇ ಇಂಥದ್ದೆಲ್ಲ ಯಾಕಾಗುತ್ತದೆ. ಇದು ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ಯುಟಿ ಖಾದರ್ ಹೇಳಿದ್ದಾರೆ.

CID Notice: ಪ್ರಿಯಾಂಕ್ ಖರ್ಗೆ ಹಿಂದೆ ಪಕ್ಷ ಇದೆ, ಬೆದರಿಕೆಗೆ ಬಗ್ಗಲ್ಲ; ಸಿದ್ದರಾಮಯ್ಯ

ಅಧಿಕಾರಿಗಳ ಸಹಾಯವಿಲ್ಲದೆ ಇದೆಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಆದರೆ, ಸಾರ್ವಜನಿಕವಾಗಿ ಇರೋ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆಗೆ ಸರ್ಕಾರ ನೋಟಿಸ್ ಜಾರಿ ಮಾಡುತ್ತದೆ. ಸರ್ಕಾರದ ಹಿಂದಿರುವ ಉದ್ದೇಶವಾದರೂ ಏನು. ನಿರುದ್ಯೋಗ ಹಾಗೂ ಭ್ರಷ್ಟಾಚಾರದ ಕುರಿತಾಗಿ ಸರ್ಕಾರದ ವಿರುದ್ಧ ಯಾರೂ ಮಾತನಾಡಲೇಬಾರದೇ? ಎಂದು ಖಾದರ್ ಪ್ರಶ್ನೆ ಮಾಡಿದ್ದಾರೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more