ಪ್ರಿಯಾಂಕ್ ಖರ್ಗೆಗೆ ನೋಟಿಸ್, ಯುಟಿ ಖಾದರ್ ಗರಂ!

ಪ್ರಿಯಾಂಕ್ ಖರ್ಗೆಗೆ ನೋಟಿಸ್, ಯುಟಿ ಖಾದರ್ ಗರಂ!

Published : Apr 25, 2022, 06:03 PM IST

ಪಿಎಸ್ಐ ನೇಮಕಾತಿ ವಿಚಾರದಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡಿರುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನ ಹಿರಿಯ ನಾಯಕ ಯುಟಿ ಖಾದರ್, ನೋಟಿಸ್ ನೀಡಿರುವ ಕ್ರಮವನ್ನು ಟೀಕಿಸಿದ್ದಾರೆ,
 

ಬೆಂಗಳೂರು (ಏ.25): ಪಿಎಸ್ಐ ನೇಮಕಾತಿ ವಿಚಾರದಲ್ಲಿ (PSI Recruitment Scam) ಕಾಂಗ್ರೆಸ್ ಶಾಸಕ (Congress MLA) ಪ್ರಿಯಾಂಕ್ ಖರ್ಗೆಗೆ (Priyank Kharge) ಸಿಐಡಿ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲಿಯೇ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ. ತನಿಖೆ ಬಿಟ್ಟು, ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡ್ತಾರೆ. ಈ ಬೆದರಿಕೆಗೆ ಕಾಂಗ್ರೆಸ್ ಬಗ್ಗೋದಿಲ್ಲ ಎಂದು ಯುಟಿ ಖಾದರ್ (UT Khader) ಹೇಳಿದ್ದಾರೆ.

ಅಧಿಕಾರಿಗಳ ಬೆಂಬಲ ಇಲ್ಲದೆ ನೇಮಕಾತಿ ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿ ಕೊಟ್ಟಿದ್ದಾರೆ.  ಈ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲವೇ, ಇದು ಗುಪ್ತಚರ ವೈಫಲ್ಯ. ಮಾಹಿತಿ ಕೊಟ್ಟವರಿಗೆ ನೋಟಿಸ್ ನೀಡುವುದು ವ್ಯವಸ್ಥೆಯೇ. ಬಿಜೆಪಿ ಸರ್ಕಾರ ಇರೋವಾಗಲೇ ಇಂಥದ್ದೆಲ್ಲ ಯಾಕಾಗುತ್ತದೆ. ಇದು ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ಯುಟಿ ಖಾದರ್ ಹೇಳಿದ್ದಾರೆ.

CID Notice: ಪ್ರಿಯಾಂಕ್ ಖರ್ಗೆ ಹಿಂದೆ ಪಕ್ಷ ಇದೆ, ಬೆದರಿಕೆಗೆ ಬಗ್ಗಲ್ಲ; ಸಿದ್ದರಾಮಯ್ಯ

ಅಧಿಕಾರಿಗಳ ಸಹಾಯವಿಲ್ಲದೆ ಇದೆಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಆದರೆ, ಸಾರ್ವಜನಿಕವಾಗಿ ಇರೋ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆಗೆ ಸರ್ಕಾರ ನೋಟಿಸ್ ಜಾರಿ ಮಾಡುತ್ತದೆ. ಸರ್ಕಾರದ ಹಿಂದಿರುವ ಉದ್ದೇಶವಾದರೂ ಏನು. ನಿರುದ್ಯೋಗ ಹಾಗೂ ಭ್ರಷ್ಟಾಚಾರದ ಕುರಿತಾಗಿ ಸರ್ಕಾರದ ವಿರುದ್ಧ ಯಾರೂ ಮಾತನಾಡಲೇಬಾರದೇ? ಎಂದು ಖಾದರ್ ಪ್ರಶ್ನೆ ಮಾಡಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more