ಪಿಎಸ್ಐ ಹುದ್ದೆಗೆ ಎಬಿವಿಪಿ, ಶ್ರೀರಾಮ ಸೇನೆ ಕಾರ್ಯಕರ್ತರ ನೇಮಕಕ್ಕೆ ಪ್ಲಾನ್!

ಪಿಎಸ್ಐ ಹುದ್ದೆಗೆ ಎಬಿವಿಪಿ, ಶ್ರೀರಾಮ ಸೇನೆ ಕಾರ್ಯಕರ್ತರ ನೇಮಕಕ್ಕೆ ಪ್ಲಾನ್!

Published : Apr 23, 2022, 03:58 PM ISTUpdated : Apr 23, 2022, 05:15 PM IST

402 ಪಿಎಸ್ಐ ನೇಮಕಾತಿಯಲ್ಲೂ ಅಕ್ರಮ ನಡೆದಿದೆ. ಪಿಎಸ್ಐ ಹುದ್ದೆಗೆ ಎಬಿವಿಪಿ ಹಾಗೂ ಶ್ರೀರಾಮಸೇನೆ ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳುವ ಪ್ಲ್ಯಾನ್ ಮಾಡಲಾಗಿತ್ತು ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ರಾಜ್ಯ ಸರ್ಕಾರದ ಮೇಲೆ ಗಂಭೀರವಾದ ಆರೋಪ ಮಾಡಿದ್ದಾರೆ.
 


ಬೆಂಗಳೂರು (ಏ.23): ಪಿಎಸ್ಐ ನೇಮಕಾತಿ ಹಗರಣದ ವಿಚಾರದಲ್ಲಿ(PSI Recruitment Scam) ದಿನಕ್ಕೊಂದರಂತೆ ಹೊಸ ಸುದ್ದಿಗಳು ಹೊರಗಡೆ ಬರುತ್ತಿವೆ. ರಾಜ್ಯದಲ್ಲಿ 402 ಪಿಎಸ್ಐ ನೇಮಕಾತಿಯಲ್ಲೂ ಅಕ್ರಮ ನಡೆದಿದೆ. ಎಬಿವಿಪಿ ಹಾಗೂ ಶ್ರೀರಾಮಸೇನೆ ಕಾರ್ಯಕರ್ತರನ್ನು ಈ ಹುದ್ದೆಗೆ ನೇಮಿಸಿಕೊಳ್ಳಲು ಸರ್ಕಾರ ಬಯಸಿತ್ತು ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Congress MLA Priyank Kharge) ಗಂಭೀರ ಆರೋಪ ಮಾಡಿದ್ದಾರೆ.

ಇದಲ್ಲದೆ, ಮುಂದೆ ಆಗಬೇಕಾಗಿರುವ ನೇಮಕಾತಿಗಳು ಕೂಡ ಇದಾಗಲೇ ಬುಕ್ ಆಗಿದೆ. ಎಬಿವಿಪಿ (ABVP), ಶ್ರೀರಾಮಸೇನೆ (Sri Rama Sene) ಕಾರ್ಯಕರ್ತರನ್ನೇ ನೇಮಕ ಮಾಡಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಮಟ್ಟದಲ್ಲೂ ಪ್ಲ್ಯಾನ್ ಮಾಡಿತ್ತು. ಚೇತನ್ ನಂದಗಾಂವ್ ಎನ್ನುವ ವ್ಯಕ್ತಿ ಶ್ರೀರಾಮಸೇನೆ ಕಾರ್ಯಕರ್ತ, ಅರುಣ್ ಕುಮಾರ್ ಎನ್ನುವ ವ್ಯಕ್ತಿ ಎಬಿವಿಪಿ ಕಾರ್ಯಕರ್ತ ಹಾಗೂ ಪ್ರವೀಣ್ ಕುಮಾರ್ ಎನ್ನುವ ವ್ಯಕ್ತಿ ಈಗಾಗಲೇ ಪಿಎಸ್ಐ ಅಗಿ ನೇಮಕವಾಗಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

PSI ನೇಮಕಾತಿ ಹರಗಣದ ಸೂತ್ರಧಾರ ಕಾಂಗ್ರೆಸ್‌ನ ಆರ್‌ಡಿ ಪಾಟೀಲ್‌ಗಾಗಿ ಹುಡುಕಾಟ

ಬಿಜೆಪಿ ತನಗೆ ಬೇಕಾದವರನ್ನು ಪೊಲೀಸ್ ಇಲಾಖೆಯಲ್ಲಿ ನೇಮಕ ಮಾಡುತ್ತಿದೆ. ಪಿಎಸ್ಐ ನೇಮಕಾತಿಯಲ್ಲಿ ಈಗಾಗಲೇ ಆಯ್ಕೆಯಾಗಿರುವವರು ಬಿಜೆಪಿಗೆ ಬೇಕಾದಂಥ ವ್ಯಕ್ತಿಗಳಾಗಿದ್ದಾರೆ. 545 ಪಿಎಸ್ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಮಾತ್ರವಲ್ಲ ಮುಂದೆ ನಡೆಯಬೇಕಾಗಿರುವ 402 ನೇಮಕಾತಿಯಲ್ಲೂ ಅಕ್ರಮದ ಪ್ಲ್ಯಾನ್ ಆಗಿತ್ತು ಎಂದು ಹೇಳಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more