ಪಿಎಸ್ಐ ಹುದ್ದೆಗೆ ಎಬಿವಿಪಿ, ಶ್ರೀರಾಮ ಸೇನೆ ಕಾರ್ಯಕರ್ತರ ನೇಮಕಕ್ಕೆ ಪ್ಲಾನ್!

ಪಿಎಸ್ಐ ಹುದ್ದೆಗೆ ಎಬಿವಿಪಿ, ಶ್ರೀರಾಮ ಸೇನೆ ಕಾರ್ಯಕರ್ತರ ನೇಮಕಕ್ಕೆ ಪ್ಲಾನ್!

Published : Apr 23, 2022, 03:58 PM ISTUpdated : Apr 23, 2022, 05:15 PM IST

402 ಪಿಎಸ್ಐ ನೇಮಕಾತಿಯಲ್ಲೂ ಅಕ್ರಮ ನಡೆದಿದೆ. ಪಿಎಸ್ಐ ಹುದ್ದೆಗೆ ಎಬಿವಿಪಿ ಹಾಗೂ ಶ್ರೀರಾಮಸೇನೆ ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳುವ ಪ್ಲ್ಯಾನ್ ಮಾಡಲಾಗಿತ್ತು ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ರಾಜ್ಯ ಸರ್ಕಾರದ ಮೇಲೆ ಗಂಭೀರವಾದ ಆರೋಪ ಮಾಡಿದ್ದಾರೆ.
 


ಬೆಂಗಳೂರು (ಏ.23): ಪಿಎಸ್ಐ ನೇಮಕಾತಿ ಹಗರಣದ ವಿಚಾರದಲ್ಲಿ(PSI Recruitment Scam) ದಿನಕ್ಕೊಂದರಂತೆ ಹೊಸ ಸುದ್ದಿಗಳು ಹೊರಗಡೆ ಬರುತ್ತಿವೆ. ರಾಜ್ಯದಲ್ಲಿ 402 ಪಿಎಸ್ಐ ನೇಮಕಾತಿಯಲ್ಲೂ ಅಕ್ರಮ ನಡೆದಿದೆ. ಎಬಿವಿಪಿ ಹಾಗೂ ಶ್ರೀರಾಮಸೇನೆ ಕಾರ್ಯಕರ್ತರನ್ನು ಈ ಹುದ್ದೆಗೆ ನೇಮಿಸಿಕೊಳ್ಳಲು ಸರ್ಕಾರ ಬಯಸಿತ್ತು ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Congress MLA Priyank Kharge) ಗಂಭೀರ ಆರೋಪ ಮಾಡಿದ್ದಾರೆ.

ಇದಲ್ಲದೆ, ಮುಂದೆ ಆಗಬೇಕಾಗಿರುವ ನೇಮಕಾತಿಗಳು ಕೂಡ ಇದಾಗಲೇ ಬುಕ್ ಆಗಿದೆ. ಎಬಿವಿಪಿ (ABVP), ಶ್ರೀರಾಮಸೇನೆ (Sri Rama Sene) ಕಾರ್ಯಕರ್ತರನ್ನೇ ನೇಮಕ ಮಾಡಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಮಟ್ಟದಲ್ಲೂ ಪ್ಲ್ಯಾನ್ ಮಾಡಿತ್ತು. ಚೇತನ್ ನಂದಗಾಂವ್ ಎನ್ನುವ ವ್ಯಕ್ತಿ ಶ್ರೀರಾಮಸೇನೆ ಕಾರ್ಯಕರ್ತ, ಅರುಣ್ ಕುಮಾರ್ ಎನ್ನುವ ವ್ಯಕ್ತಿ ಎಬಿವಿಪಿ ಕಾರ್ಯಕರ್ತ ಹಾಗೂ ಪ್ರವೀಣ್ ಕುಮಾರ್ ಎನ್ನುವ ವ್ಯಕ್ತಿ ಈಗಾಗಲೇ ಪಿಎಸ್ಐ ಅಗಿ ನೇಮಕವಾಗಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

PSI ನೇಮಕಾತಿ ಹರಗಣದ ಸೂತ್ರಧಾರ ಕಾಂಗ್ರೆಸ್‌ನ ಆರ್‌ಡಿ ಪಾಟೀಲ್‌ಗಾಗಿ ಹುಡುಕಾಟ

ಬಿಜೆಪಿ ತನಗೆ ಬೇಕಾದವರನ್ನು ಪೊಲೀಸ್ ಇಲಾಖೆಯಲ್ಲಿ ನೇಮಕ ಮಾಡುತ್ತಿದೆ. ಪಿಎಸ್ಐ ನೇಮಕಾತಿಯಲ್ಲಿ ಈಗಾಗಲೇ ಆಯ್ಕೆಯಾಗಿರುವವರು ಬಿಜೆಪಿಗೆ ಬೇಕಾದಂಥ ವ್ಯಕ್ತಿಗಳಾಗಿದ್ದಾರೆ. 545 ಪಿಎಸ್ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಮಾತ್ರವಲ್ಲ ಮುಂದೆ ನಡೆಯಬೇಕಾಗಿರುವ 402 ನೇಮಕಾತಿಯಲ್ಲೂ ಅಕ್ರಮದ ಪ್ಲ್ಯಾನ್ ಆಗಿತ್ತು ಎಂದು ಹೇಳಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more