News Hour: ರಾಜ್ಯದ ಇತರ ಜಿಲ್ಲೆಗಳಲ್ಲೂ ಅಕ್ರಮದ ಜಾಡು! ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ಯಾರು?

News Hour: ರಾಜ್ಯದ ಇತರ ಜಿಲ್ಲೆಗಳಲ್ಲೂ ಅಕ್ರಮದ ಜಾಡು! ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ಯಾರು?

Published : May 06, 2022, 11:55 PM IST


ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಮುಂದುವರಿಯುತ್ತಿದ್ದಂತೆ, ಅಕ್ರಮದ ಜಾಡು ಬೇರೆ ಜಿಲ್ಲೆಗಳಿಗೂ ವಿಸ್ತರಿಸಿರುವ ಸುಳಿವು ಸಿಕ್ಕಿದೆ. ಕ್ಷಣಕ್ಕೊಂದು ಹೊಸವಿಚಾರ, ದಿನಕ್ಕೊಂದು ಹೊಸ ಸುಳಿವು ಬಯಲಾಗುತ್ತಿದೆ.

ಬೆಂಗಳೂರು (ಮೇ.6): ಪಿಎಸ್ಐ ನೇಮಕಾತಿ ಹಗಣರದಲ್ಲಿ (PSI Recruitment Scam) ಸಿಐಡಿ ತನಿಖೆ ಇನ್ನಷ್ಟು ಚುರುಕು ಮಾಡುತ್ತಿದ್ದಂತೆ, ಅಕ್ರಮದ ಬೇರುಗಳು ಇನ್ನಷ್ಟು ವಿಸ್ತಾರವಾಗಿವವೆ. ಈವರೆಗೂ ಬೆಂಗಳೂರು (Bengaluru) ಹಾಗೂ ಕಲಬುರಗಿಯಲ್ಲಿ (Kalaburagi) ಮಾತ್ರವೇ ವ್ಯಾಪಿಸಿದೆ ಎನ್ನಲಾಗಿದ್ದ ಪರೀಕ್ಷಾ ಅಕ್ರಮ (Exam Scam) ಈಗ ರಾಜ್ಯದ ಇತರ ಜಿಲ್ಲೆಗಳಿಗೂ ವ್ಯಾಪಿಸಿದೆ.

ಸಿಐಡಿ (CID) ಹೇಳಿರುವ ಪ್ರಕಾರ, ತುಮಕೂರು ಹಾಗೂ ಮಂಗಳೂರಿನ ಕೆಲ ಪರೀಕ್ಷಾ ಕೇಂದ್ರಗಳ ಮೇಲೂ ಅನುಮಾನ ವ್ಯಕ್ತಪಡಿಸಿದೆ. ಪರೀಕ್ಷೆ ನಡೆದ 92 ಕೇಂದ್ರಗಳ ಪೈಕಿ ಕನಿಷ್ಠ 40ರಲ್ಲಿ ಅಕ್ರಮ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತಪಡಿಸಿದೆ.

ಸರ್ಕಾರಕ್ಕೂ ದೊಡ್ಡ ಮಟ್ಟದಲ್ಲಿ ಮುಜುಗರ ತಂದಿರುವ ಪಿಎಸ್ಐ ನೇಮಕಾತಿ ಹಗರಣ ಪ್ರಕರಣದಲ್ಲಿ ಬಗೆದಷ್ಟು ಹೊಸ ಹೊಸ ವಿಚಾರಗಳು ಬಹಿರಂಗವಾಗುತ್ತಿದೆ. ಪೊಲೀಸರಿಂದಲೇ ಕಿಂಗ್ ಪಿನ್ ಗಳಿಗೆ ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಲಾಗಿತ್ತು. ಡಿವೈಎಸ್ ಪಿ ಮಲ್ಲಿಕಾರ್ಜುನ್ ಸಾಲಿ (DYSP Mallikarjun Sali), ಕಿಂಗ್ ಪಿನ್ ಗಳಿಂದ ದುಡ್ಡು ಕಿತ್ತಿದ್ದರು ಎನ್ನುವ ಮಾಹಿತಿ ಬಹಿರಂಗವಾಗಿದೆ. 

ಪಿಎಸ್‌ಐ ನೇಮಕಾತಿ ಹಗರಣ: ತುಮಕೂರು, ಮಂಗಳೂರಿನ ಕೇಂದ್ರಗಳಲ್ಲೂ ಅಕ್ರಮ?

ಇನ್ನೊಂದೆಡೆ ಸಚಿವ ಅಶ್ವತ್ಥ್ ನಾರಾಯಣ್ ಅವರ ಸಂಬಂಧಿಗಳು ಎನ್ನಲಾಗಿರುವ ನಾಗೇಶ್ ಗೌಡ ಹಾಗೂ ದರ್ಶನ್ ಗೌಡ ಅಕ್ರಮ ನಡೆಸಿ ಪಿಎಸ್ಐ ಆಗಿ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿರುವ ಬೆನ್ನಲ್ಲೇ, ದರ್ಶನ್ ಗೌಡ ಅವರ ತಂದೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಅಶ್ವತ್ಥ್ ನಾರಾಯಣ್ ನಮಗೆ ದೂರದ ಸಂಬಂಧಿ, ನಾವು ಧೈರ್ಯವಾಗಿದ್ದೇವೆ ಎಲ್ಲೂ ಊರು ಬಿಟ್ಟು ಹೋಗಿಲ್ಲ. ನಾವು ಮದುವೆಗಾಗಿ ಜಮೀನು ಮಾರಿದ್ದೆವು ಎಂದು ವೆಂಕಟೇಶ್ ಗೌಡ  ಹೇಳಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more