News Hour: ರಾಜ್ಯದ ಇತರ ಜಿಲ್ಲೆಗಳಲ್ಲೂ ಅಕ್ರಮದ ಜಾಡು! ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ಯಾರು?

News Hour: ರಾಜ್ಯದ ಇತರ ಜಿಲ್ಲೆಗಳಲ್ಲೂ ಅಕ್ರಮದ ಜಾಡು! ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ಯಾರು?

Published : May 06, 2022, 11:55 PM IST


ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಮುಂದುವರಿಯುತ್ತಿದ್ದಂತೆ, ಅಕ್ರಮದ ಜಾಡು ಬೇರೆ ಜಿಲ್ಲೆಗಳಿಗೂ ವಿಸ್ತರಿಸಿರುವ ಸುಳಿವು ಸಿಕ್ಕಿದೆ. ಕ್ಷಣಕ್ಕೊಂದು ಹೊಸವಿಚಾರ, ದಿನಕ್ಕೊಂದು ಹೊಸ ಸುಳಿವು ಬಯಲಾಗುತ್ತಿದೆ.

ಬೆಂಗಳೂರು (ಮೇ.6): ಪಿಎಸ್ಐ ನೇಮಕಾತಿ ಹಗಣರದಲ್ಲಿ (PSI Recruitment Scam) ಸಿಐಡಿ ತನಿಖೆ ಇನ್ನಷ್ಟು ಚುರುಕು ಮಾಡುತ್ತಿದ್ದಂತೆ, ಅಕ್ರಮದ ಬೇರುಗಳು ಇನ್ನಷ್ಟು ವಿಸ್ತಾರವಾಗಿವವೆ. ಈವರೆಗೂ ಬೆಂಗಳೂರು (Bengaluru) ಹಾಗೂ ಕಲಬುರಗಿಯಲ್ಲಿ (Kalaburagi) ಮಾತ್ರವೇ ವ್ಯಾಪಿಸಿದೆ ಎನ್ನಲಾಗಿದ್ದ ಪರೀಕ್ಷಾ ಅಕ್ರಮ (Exam Scam) ಈಗ ರಾಜ್ಯದ ಇತರ ಜಿಲ್ಲೆಗಳಿಗೂ ವ್ಯಾಪಿಸಿದೆ.

ಸಿಐಡಿ (CID) ಹೇಳಿರುವ ಪ್ರಕಾರ, ತುಮಕೂರು ಹಾಗೂ ಮಂಗಳೂರಿನ ಕೆಲ ಪರೀಕ್ಷಾ ಕೇಂದ್ರಗಳ ಮೇಲೂ ಅನುಮಾನ ವ್ಯಕ್ತಪಡಿಸಿದೆ. ಪರೀಕ್ಷೆ ನಡೆದ 92 ಕೇಂದ್ರಗಳ ಪೈಕಿ ಕನಿಷ್ಠ 40ರಲ್ಲಿ ಅಕ್ರಮ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತಪಡಿಸಿದೆ.

ಸರ್ಕಾರಕ್ಕೂ ದೊಡ್ಡ ಮಟ್ಟದಲ್ಲಿ ಮುಜುಗರ ತಂದಿರುವ ಪಿಎಸ್ಐ ನೇಮಕಾತಿ ಹಗರಣ ಪ್ರಕರಣದಲ್ಲಿ ಬಗೆದಷ್ಟು ಹೊಸ ಹೊಸ ವಿಚಾರಗಳು ಬಹಿರಂಗವಾಗುತ್ತಿದೆ. ಪೊಲೀಸರಿಂದಲೇ ಕಿಂಗ್ ಪಿನ್ ಗಳಿಗೆ ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಲಾಗಿತ್ತು. ಡಿವೈಎಸ್ ಪಿ ಮಲ್ಲಿಕಾರ್ಜುನ್ ಸಾಲಿ (DYSP Mallikarjun Sali), ಕಿಂಗ್ ಪಿನ್ ಗಳಿಂದ ದುಡ್ಡು ಕಿತ್ತಿದ್ದರು ಎನ್ನುವ ಮಾಹಿತಿ ಬಹಿರಂಗವಾಗಿದೆ. 

ಪಿಎಸ್‌ಐ ನೇಮಕಾತಿ ಹಗರಣ: ತುಮಕೂರು, ಮಂಗಳೂರಿನ ಕೇಂದ್ರಗಳಲ್ಲೂ ಅಕ್ರಮ?

ಇನ್ನೊಂದೆಡೆ ಸಚಿವ ಅಶ್ವತ್ಥ್ ನಾರಾಯಣ್ ಅವರ ಸಂಬಂಧಿಗಳು ಎನ್ನಲಾಗಿರುವ ನಾಗೇಶ್ ಗೌಡ ಹಾಗೂ ದರ್ಶನ್ ಗೌಡ ಅಕ್ರಮ ನಡೆಸಿ ಪಿಎಸ್ಐ ಆಗಿ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿರುವ ಬೆನ್ನಲ್ಲೇ, ದರ್ಶನ್ ಗೌಡ ಅವರ ತಂದೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಅಶ್ವತ್ಥ್ ನಾರಾಯಣ್ ನಮಗೆ ದೂರದ ಸಂಬಂಧಿ, ನಾವು ಧೈರ್ಯವಾಗಿದ್ದೇವೆ ಎಲ್ಲೂ ಊರು ಬಿಟ್ಟು ಹೋಗಿಲ್ಲ. ನಾವು ಮದುವೆಗಾಗಿ ಜಮೀನು ಮಾರಿದ್ದೆವು ಎಂದು ವೆಂಕಟೇಶ್ ಗೌಡ  ಹೇಳಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more