ರಾಘವೇಂದ್ರ ಸ್ವಾಮಿ 352ನೇ ಆರಾಧನೆ ಮಹೋತ್ಸವ: ಮಂತ್ರಾಲಯದಲ್ಲಿ ರಾಯರ ಭಕ್ತರ ಸಂಭ್ರಮವೋ ಸಂಭ್ರಮ

ರಾಘವೇಂದ್ರ ಸ್ವಾಮಿ 352ನೇ ಆರಾಧನೆ ಮಹೋತ್ಸವ: ಮಂತ್ರಾಲಯದಲ್ಲಿ ರಾಯರ ಭಕ್ತರ ಸಂಭ್ರಮವೋ ಸಂಭ್ರಮ

Published : Sep 01, 2023, 10:45 AM IST

ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ ಸಂಭ್ರಮ ಮನೆ ಮಾಡಿದೆ. ಸಪ್ತರಾತ್ರೋತ್ಸವದ ಸಂಭ್ರಮದ ನಿಮಿತ್ಯವಾಗಿ ಪೂರ್ವಾರಾಧನೆ ಆಚರಣೆ ಆರಂಭವಾಗಿದೆ. ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ರಾಯರ ಆರಾಧನೆ ಕಳೆಕಟ್ಟುತ್ತಿದೆ.
 

ಮಂತ್ರಾಲಯದಲ್ಲಿ ಈಗ ಸಂಭ್ರಮವೋ ಸಂಭ್ರಮ.. ತುಂಗಾ ತಟದಲ್ಲಿ ರಾಯರ ಆರಾಧನಾ ಮಹೋತ್ಸವ(Aradhana Mahotsava) ಕಳೆಗಟ್ಟಿದೆ. ಗುರು ರಾಘವೇಂದ್ರ ಸ್ವಾಮಿ 352ನೇ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಇಂದು ಪೂರ್ವಾರಾಧನೆಯ ಸಡಗರವಿದ್ದು,  ಬೆಳಗ್ಗೆಯಿಂದಲೇ ನಾನಾ ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ. ಗುರುವಾರ ವಿಶೇಷವಾಗಿ ನಿರ್ಮಾಲ್ಯ ವಿಸರ್ಜನ, ಉತ್ಸವ ರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ, ಅಲಂಕಾರ ಸಂತರ್ಪಣೆ, ಹಸ್ತೋದಕ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ನಡೆಯಿತು. ಇದೇ ಮೊದಲ ಬಾರಿಗೆ ತಮಿಳುನಾಡಿನ ಶ್ರೀರಂಗಂನ ಶ್ರೀ ರಂಗನಾಥ ದೇವಸ್ಥಾನದಿಂದ ಮತ್ತು ಆಂಧ್ರಪ್ರದೇಶದ ಅಹೋಬಲ ಕ್ಷೇತ್ರದಿಂದ ಬಂದ ಶೇಷವಸ್ತ್ರವನ್ನ ರಾಯರಿಗೆ ಅರ್ಪಿಸಲಾಯ್ತು. ಪೂರ್ವಾರಾಧನೆ ಆಗಮಿಸಿದ ಆಂಧ್ರಪ್ರದೇಶದ ರಾಜ್ಯಪಾಲರಾದ ನ್ಯಾ. ಅಬ್ದುಲ್ ನಜೀರ್ ಶ್ರೀಮಠದ ಸಂಪ್ರದಾಯದಂತೆ ವೇಷಧರಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ(Raghavendra Swamy) ದರ್ಶನ ಪಡೆದರು.ಆ ಬಳಿಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ವಾನ್ ರಾಮವಿಠಲಾಚಾರ್ಯ, ವಿದ್ವಾನ್ ಡಾ.ಗರಿಕಿಪಾಟಿ ನರಸಿಂಹರಾವ್ , ಎನ್. ಚಂದ್ರಶೇಖರನ್, ವಿಶ್ವನಾಥ ಕರಾಡ್ ಅವರಿಗೆ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು.

ಇದನ್ನೂ ವೀಕ್ಷಿಸಿ:  Today Horoscope: ಇಂದು ರಾಯರ 352ನೇ ಆರಾಧನಾ ಮಹೋತ್ಸವ..ಈ ರೀತಿಯಾಗಿ ಮನೆಯಲ್ಲೇ ಪೂಜಿಸಿ

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more