ಇಂದು ರಾಹುಲ್‌ಗಾಂಧಿ ರಾಜ್ಯಕ್ಕೆ, ಪಕ್ಷದ ನಾಯ​ಕ​ರೊಂದಿಗೆ ಸರಣಿ ಸಭೆ,  ಚುನಾವಣಾ ರಣತಂತ್ರ ತಯಾರಿ

ಇಂದು ರಾಹುಲ್‌ಗಾಂಧಿ ರಾಜ್ಯಕ್ಕೆ, ಪಕ್ಷದ ನಾಯ​ಕ​ರೊಂದಿಗೆ ಸರಣಿ ಸಭೆ, ಚುನಾವಣಾ ರಣತಂತ್ರ ತಯಾರಿ

Published : Mar 31, 2022, 10:18 AM IST

ಕಾಂಗ್ರೆಸ್‌ ವರಿಷ್ಠ ರಾಹುಲ್‌ಗಾಂಧಿ ಎರಡು ದಿನಗಳ ಭೇಟಿಗಾಗಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ದೆಹಲಿಯಿಂದ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸುವ ರಾಹುಲ್‌ ಗಾಂಧಿ ಬಳಿಕ ರಸ್ತೆ ಮಾರ್ಗವಾಗಿ ಸಿದ್ಧಗಂಗಾ ಮಠ ತಲುಪಲಿದ್ದಾರೆ. 

ಬೆಂಗಳೂರು (ಮಾ. 31): ಕಾಂಗ್ರೆಸ್‌ ವರಿಷ್ಠ ರಾಹುಲ್‌ಗಾಂಧಿ (Rahul Gandhi) ಎರಡು ದಿನಗಳ ಭೇಟಿಗಾಗಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ದೆಹಲಿಯಿಂದ (Delhi) ವಿಮಾನದಲ್ಲಿ ಬೆಂಗಳೂರಿಗೆ (Bengaluru) ಆಗಮಿಸುವ ರಾಹುಲ್‌ ಗಾಂಧಿ ಬಳಿಕ ರಸ್ತೆ ಮಾರ್ಗವಾಗಿ ಸಿದ್ಧಗಂಗಾ ಮಠ (Siddaganga Mutt) ತಲುಪಲಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರ 105ನೇ ಜಯಂತಿ ಪ್ರಯುಕ್ತ ಗದ್ದುಗೆಗೆ ನಮನ ಸಲ್ಲಿಸಿ ಬಳಿಕ ಸಂಜೆ 6.45ಕ್ಕೆ ಬೆಂಗಳೂರಿನ ಕುಮಾರಕೃಪ ಅತಿಥಿಗೃಹಕ್ಕೆ ವಾಪಸಾಗಲಿದ್ದಾರೆ. ಗುರುವಾರ ಸಂಜೆ ಹಾಗೂ ಶುಕ್ರವಾರ ಎರಡೂ ದಿನ ಪಕ್ಷದ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಏ.1 ರಂದು ಬೆಳಗ್ಗೆ 10.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಕಾರಿ ಸಮಿತಿ ಉದ್ದೇಶಿಸಿ ರಾಹು​ಲ್‌ ಮಾತನಾಡಲಿದ್ದಾರೆ. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್‌, ರಣದೀಪ್‌ಸಿಂಗ್‌ ಸುರ್ಜೇವಾಲ, ಕೆಪಿ​ಸಿಸಿ ಅಧ್ಯ​ಕ್ಷ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಸೇರಿ ಹಲವರು ಭಾಗವಹಿಸಲಿದ್ದಾರೆ. ಈ ವೇಳೆ ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಚುನಾವಣಾ ಸಿದ್ಧತೆಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ.


 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more