ಐಟಿ ದಾಳಿಯಲ್ಲಿ ಬಯಲಾಯ್ತು 403 ಕೋಟಿ ವೈದ್ಯ ಸೀಟ್ ದಂಧೆ

ಐಟಿ ದಾಳಿಯಲ್ಲಿ ಬಯಲಾಯ್ತು 403 ಕೋಟಿ ವೈದ್ಯ ಸೀಟ್ ದಂಧೆ

Suvarna News   | Asianet News
Published : Feb 20, 2021, 12:14 PM ISTUpdated : Feb 20, 2021, 12:18 PM IST

ದಕ್ಷಿಣ ಕನ್ನಡದಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ವ್ಯಕ್ತಿಯೊಬ್ಬರ ಮನೆಯಲ್ಲಿ 40 ಕೆ.ಜಿ.ಗೂ ಅಧಿಕ ಚಿನ್ನ ಪತ್ತೆಯಾಗಿದೆ. ಅಪಾರ ಪ್ರಮಾಣದ ವಜ್ರದ ಹರಳು, ಬೆಳ್ಳಿ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. 

ಬೆಂಗಳೂರು (ಫೆ. 20): ಕರ್ನಾಟಕ ಮತ್ತು ಕೇರಳದಲ್ಲಿ ಪ್ರತಿಷ್ಠಿತ ಒಂಬತ್ತು ಟ್ರಸ್ಟ್‌ಗಳು ಮುನ್ನಡೆಸುತ್ತಿರುವ ವೈದ್ಯಕೀಯ ಕಾಲೇಜುಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ (ಐಟಿ), ನೂರಾರು ಕೋಟಿ ರುಪಾಯಿ ಅವ್ಯವಹಾರದ ವೈದ್ಯಕೀಯ ಸೀಟು ಬ್ಲಾಕಿಂಗ್‌ ಜಾಲವನ್ನು ಪತ್ತೆಹಚ್ಚಿದೆ.

ಬೆಂಗಳೂರು ಮತ್ತು ಮಂಗಳೂರಿನಲ್ಲಿರುವ ಕಾಲೇಜಿನ ಟ್ರಸ್ಟಿಗಳು, ಮಾಲಿಕರು, ನಿರ್ದೇಶಕರ ನಿವಾಸ, ಕಚೇರಿ ಸೇರಿದಂತೆ ಒಟ್ಟು 56 ವಿವಿಧ ಸ್ಥಳದಲ್ಲಿ ಈ ದಾಳಿ ನಡೆದಿತ್ತು. ದಾಳಿ ವೇಳೆ ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ, ವಿದೇಶಿ ನೆಲದಲ್ಲಿರುವ ಬೇನಾಮಿ ಆಸ್ತಿ, ಶೈಕ್ಷಣಿಕ ಸಂಸ್ಥೆ ಹೆಸರಿನಲ್ಲಿ ಇನ್ನಿತರ ವಾಣಿಜ್ಯ ವ್ಯವಹಾರ ನಡೆಸುತ್ತಿರುವ ಬಗ್ಗೆ ದಾಖಲೆಯನ್ನು ಜಪ್ತಿ ಮಾಡಲಾಗಿದೆ. .30 ಕೋಟಿ ಮೌಲ್ಯದ 81 ಕೆ.ಜಿ ಚಿನ್ನಾಭರಣ, .15.09 ಕೋಟಿ ನಗದು, 50 ಕ್ಯಾರೆಟ್‌ ವಜ್ರ, 40 ಕೆ.ಜಿ ಬೆಳ್ಳಿ, ಘಾನಾ ದೇಶದಲ್ಲಿ . 2.39 ಕೋಟಿ ಬೇನಾಮಿ ಆಸ್ತಿ ಪತ್ತೆಯಾಗಿದೆ.

 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!