ಐಟಿ ದಾಳಿಯಲ್ಲಿ ಬಯಲಾಯ್ತು 403 ಕೋಟಿ ವೈದ್ಯ ಸೀಟ್ ದಂಧೆ

ಐಟಿ ದಾಳಿಯಲ್ಲಿ ಬಯಲಾಯ್ತು 403 ಕೋಟಿ ವೈದ್ಯ ಸೀಟ್ ದಂಧೆ

Suvarna News   | Asianet News
Published : Feb 20, 2021, 12:14 PM ISTUpdated : Feb 20, 2021, 12:18 PM IST

ದಕ್ಷಿಣ ಕನ್ನಡದಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ವ್ಯಕ್ತಿಯೊಬ್ಬರ ಮನೆಯಲ್ಲಿ 40 ಕೆ.ಜಿ.ಗೂ ಅಧಿಕ ಚಿನ್ನ ಪತ್ತೆಯಾಗಿದೆ. ಅಪಾರ ಪ್ರಮಾಣದ ವಜ್ರದ ಹರಳು, ಬೆಳ್ಳಿ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. 

ಬೆಂಗಳೂರು (ಫೆ. 20): ಕರ್ನಾಟಕ ಮತ್ತು ಕೇರಳದಲ್ಲಿ ಪ್ರತಿಷ್ಠಿತ ಒಂಬತ್ತು ಟ್ರಸ್ಟ್‌ಗಳು ಮುನ್ನಡೆಸುತ್ತಿರುವ ವೈದ್ಯಕೀಯ ಕಾಲೇಜುಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ (ಐಟಿ), ನೂರಾರು ಕೋಟಿ ರುಪಾಯಿ ಅವ್ಯವಹಾರದ ವೈದ್ಯಕೀಯ ಸೀಟು ಬ್ಲಾಕಿಂಗ್‌ ಜಾಲವನ್ನು ಪತ್ತೆಹಚ್ಚಿದೆ.

ಬೆಂಗಳೂರು ಮತ್ತು ಮಂಗಳೂರಿನಲ್ಲಿರುವ ಕಾಲೇಜಿನ ಟ್ರಸ್ಟಿಗಳು, ಮಾಲಿಕರು, ನಿರ್ದೇಶಕರ ನಿವಾಸ, ಕಚೇರಿ ಸೇರಿದಂತೆ ಒಟ್ಟು 56 ವಿವಿಧ ಸ್ಥಳದಲ್ಲಿ ಈ ದಾಳಿ ನಡೆದಿತ್ತು. ದಾಳಿ ವೇಳೆ ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ, ವಿದೇಶಿ ನೆಲದಲ್ಲಿರುವ ಬೇನಾಮಿ ಆಸ್ತಿ, ಶೈಕ್ಷಣಿಕ ಸಂಸ್ಥೆ ಹೆಸರಿನಲ್ಲಿ ಇನ್ನಿತರ ವಾಣಿಜ್ಯ ವ್ಯವಹಾರ ನಡೆಸುತ್ತಿರುವ ಬಗ್ಗೆ ದಾಖಲೆಯನ್ನು ಜಪ್ತಿ ಮಾಡಲಾಗಿದೆ. .30 ಕೋಟಿ ಮೌಲ್ಯದ 81 ಕೆ.ಜಿ ಚಿನ್ನಾಭರಣ, .15.09 ಕೋಟಿ ನಗದು, 50 ಕ್ಯಾರೆಟ್‌ ವಜ್ರ, 40 ಕೆ.ಜಿ ಬೆಳ್ಳಿ, ಘಾನಾ ದೇಶದಲ್ಲಿ . 2.39 ಕೋಟಿ ಬೇನಾಮಿ ಆಸ್ತಿ ಪತ್ತೆಯಾಗಿದೆ.

 

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ