ರಾಜ್ಯಾದ್ಯಂತ ರೈಲ್‌ ರೋಕೋ ಚಳವಳಿ: ರೈತ ಮುಖಂಡರು ಪೊಲೀಸ್‌ ವಶಕ್ಕೆ

Feb 18, 2021, 4:36 PM IST

ಬೆಂಗಳೂರು(ಫೆ.18): ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಕರೆ ದೇಶಾದ್ಯಂತ ಕರೆ ಕೊಟ್ಟಿರುವ ರೈಲ್‌ ರೋಕೋ ಚಳವಳಿಗೆ ರಾಜ್ಯದಲ್ಲೂ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯಾದ್ಯಂತ ರೈಲು ನಿಲ್ದಾಣಗಳ ಬಳಿ ರೈಲ್‌ ತಡೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರೊಂದಿಗೆ ಪೊಲೀಸರು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಯಚೂರು, ಬೆಳಗಾವಿ, ವಿಜಯಪುರ, ಕೋಲಾರ, ಮೈಸೂರಿನಲ್ಲಿ ರೈಲು ನಿಲ್ದಾಣಗಳ ಬಳಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ. 

ಮೀಸಲಾತಿ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಸಿಎಂ ಬಿಎಸ್‌ವೈ