ವೀರ ಯೋಧ ಕ್ಯಾಪ್ಟನ್‌ ಪ್ರಾಂಜಲ್‌ಗಾಗಿ ಕಂಬನಿ ಮಿಡಿದ ಕರುನಾಡು!

ವೀರ ಯೋಧ ಕ್ಯಾಪ್ಟನ್‌ ಪ್ರಾಂಜಲ್‌ಗಾಗಿ ಕಂಬನಿ ಮಿಡಿದ ಕರುನಾಡು!

Published : Nov 25, 2023, 11:17 PM IST

ರಜೌರಿ ಕಾಳಗದಲ್ಲಿ ಹುತಾತ್ಮರಾದ ಐವರು ಯೋಧರ ಅಂತ್ಯಸಂಸ್ಕಾರ ಶನಿವಾರ ನಡೆದಿದೆ. ಬೆಂಗಳೂರಿನ ಕ್ಯಾಪ್ಟನ್‌ ಪ್ರಾಂಜಲ್‌ ವೆಂಕಟೇಶ್‌ ಅವರ ಅಂತಿಮ ದರ್ಶನಕ್ಕೆ ಸಾವಿರಾರು ಮಂದಿ ಬಂದಿದ್ದರು.

ಬೆಂಗಳೂರು (ನ.25): ಕರ್ನಾಟಕದ ವೀರ ಯೋಧ ಕ್ಯಾಪ್ಟನ್‌ ಪ್ರಾಂಜಲ್‌ ವೆಂಕಟೇಶ್‌ ಅವರಿಗೆ ಕರುನಾಡು ಭಾವಪೂರ್ಣವಾಗಿ ಬೀಳ್ಕೊಟ್ಟಿದೆ. ಹುತಾತ್ಮ ಯೋಧನಿಗೆ ಜನರು, ನಾಯಕರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಪ್ರಾಂಜಲ್ ಅಮರ ರಹೇ ಎಂದು ಎಲ್ಲೆಲ್ಲೂ ಜಯಘೋಷ ಮೊಳಗಿತು. 23 ಕಿಮೀ ಅಂತಿಮಯಾತ್ರೆಯ ತುಂಬಾ ಜನಸಾಗರವೇ ನೆರೆದಿತ್ತು. ಒಬ್ಬನೇ ಮಗನನ್ನು ಕಳೆದುಕೊಂಡು ಕುಟುಂಬಸ್ಥರ ಕಣ್ಣೀರಿಟ್ಟಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ಪ್ರಾಂಜಲ್ ಅಂತ್ಯಕ್ರಿಯೆ ನಡೆದಿದೆ.

ಶುಕ್ರವಾರ ರಾತ್ರಿ 10 ಗಂಟೆ ವೇಳೆ ಎಚ್‌ಎಎಲ್‌ಗೆ ಪ್ರಾರ್ಥಿವ ಶರೀರ ಬಂದಿತ್ತು. ಎಚ್‌ಎಎಲ್‌ನಲ್ಲಿ ಪ್ರಾಂಜಲ್‌ಗೆ ಕುಟುಂಬಸ್ಥರು ನಮನ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ, ಜಾರ್ಜ್, ರಾಜ್ಯಪಾಲರು ಗೌರವ ಸಲ್ಲಿಸಿದ್ದಾರೆ.

 

ಯೋಧ ಪ್ರಾಂಜಲ್‌ ಕಳೇಬರ ಇಂದು ಬೆಂಗಳೂರಿಗೆ; ಮಗನ ತ್ಯಾಗದ ಬಗ್ಗೆ ಹೆಮ್ಮೆ ಇದೆ ಎಂದ ತಂದೆ!

ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ಧರಾಮಯ್ಯ 50 ಲಕ್ಷ ಪರಿಹಾರ ಘೋಷಿಸಿದರು. ಬಿವೈ ವಿಜಯೇಂದ್ರ ,ತೇಜಸ್ವಿ ಸೂರ್ಯರಿಂದಲೂ ನಮನ. ಆ ಬಳಿಕ ಸೇನಾಧಿಕಾರಿಗಳಿಂದ ಕುಟುಂಬಸ್ಥರಿಗೆ ಪ್ರಾರ್ಥಿವ ಹಸ್ತಾಂತರ. ಆ ಬಳಿಕ ಜಿಗಣಿ ನಂದನವನ ಬಡಾವಣೆ ಮನೆಗೆ ಪಾರ್ಥಿವ ಶಿಫ್ಟ್ ಮಾಡಲಾಗಿತ್ತು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more