News Hour: ರನ್ಯಾ ರಾವ್‌ ಚಿನ್ನದ ಹಿಂದೆ ಪ್ರಭಾವಿ ಪಾತ್ರ, ಕೋರ್ಟ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಹೇಳಿದ್ದೇನು?

News Hour: ರನ್ಯಾ ರಾವ್‌ ಚಿನ್ನದ ಹಿಂದೆ ಪ್ರಭಾವಿ ಪಾತ್ರ, ಕೋರ್ಟ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಹೇಳಿದ್ದೇನು?

Published : Mar 06, 2025, 11:42 PM ISTUpdated : Mar 07, 2025, 07:02 AM IST

ನಟಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದು, ಆಕೆಯ ಹಿಂದೆ ಪ್ರಭಾವಿಗಳ ಪಾತ್ರವಿರುವ ಶಂಕೆ ವ್ಯಕ್ತವಾಗಿದೆ. ಒಂದು ಕೆಜಿ ಚಿನ್ನಕ್ಕೆ 1 ಲಕ್ಷ ಕಮಿಷನ್ ಪಡೆಯುತ್ತಿದ್ದ ರನ್ಯಾ, ಈ ಬಾರಿ 14 ಲಕ್ಷ ಪಡೆಯಬೇಕಿತ್ತು. ಆಕೆಯ ದುಬೈ ಪ್ರವಾಸದ ಖರ್ಚನ್ನೂ ಅವರೇ ನೋಡಿಕೊಳ್ಳುತ್ತಿದ್ದರು.

ಬೆಂಗಳೂರು (ಮಾ.6): ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಹಿಂದೆ ಪ್ರಭಾವಿಗಳ ಪಾತ್ರವಿರುವ ಸಂಶಯ ವ್ಯಕ್ತವಾಗಿದೆ. ಅದರೊಂದಿಗೆ ಬಗೆದಷ್ಟು ರನ್ಯಾ ರಾವ್‌ ಚಿನ್ನದ ಬೇಟೆಯ ಒಂದೊಂದು ಕಥೆಗಳು ಬಯಲಾಗುತ್ತಿವೆ.

ಒಂದು ಕೆಜಿ ಚಿನ್ನವನ್ನು ತಂದುಕೊಟ್ಟರೆ ರನ್ಯಾ ರಾವ್‌ಗೆ ಕಮೀಷನ್‌ ಆಗಿ ಸಿಗುತ್ತಿದ್ದದ್ದು 1 ಲಕ್ಷ ರೂಪಾಯಿ. ಇದಕ್ಕಾಗಿಯೇ ಆಕೆ ಗೋಲ್ಡ್‌ ಡೆಲಿವರಿ ಗರ್ಲ್‌ ಆಗಿ ಕೆಲಸ ಮಾಡುತ್ತಿದ್ದರಾ ಎನ್ನುವ ಅನುಮಾನಗಳು ಬಂದಿವೆ. ರನ್ಯಾ ರಾವ್‌ಗೆ ಈ ಬಾರಿಯ ಚಿನ್ನದ ಕಳ್ಳ ಸಾಗಣೆಗೆ 14 ಲಕ್ಷ ರೂಪಾಯಿ ಸಿಗಬೇಕಿತ್ತು. ಆಕೆಯ ದುಬೈ ಟ್ರಿಪ್‌ಗೂ ಯಾವುದೇ ಖರ್ಚಾಗುತ್ತಿರಲಿಲ್ಲ. ಇದರ ನಡುವೆ ಆಕೆಯ ಹಿಂದೆ ಇರುವ ವ್ಯಕ್ತಿಗಳು ಯಾರು ಅನ್ನೋದರ ಕುತೂಹಲ ಶುರುವಾಗಿದೆ.

ಯಾರು ಗೊತ್ತಾ ಚಿನ್ನದ ಕಳ್ಳಿ ರನ್ಯಾ ರಾವ್‌ ಪತಿ? ಬೆಂಗಳೂರಿನ ಈ ಪ್ರಸಿದ್ದ ಬಾರ್‌ ಡಿಸೈನ್‌ ಮಾಡಿದ್ದು ಇವರೇ..

ರನ್ಯಾ ರಾವ್‌ಗೆ ಜಾಮೀನು ಅರ್ಜಿ ಕೂಡ ಕೋರ್ಟ್‌ಗೆ ಬಂದಿದ್ದು, ಈ ವೇಳೆ ಡಿಆರ್‌ಐ ಅಧಿಕಾರಿಗಳು ಮಾಡಿರುವ ವಾದವನ್ನು ನೋಡಿದರೆ, ಈ ಪ್ರಕರಣದಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.
 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more