ಸಿಎಂ ಬಸವರಾಜ ಬೊಮ್ಮಾಯಿ (Basavraj Bommai) ಅವರ ಸಂಪುಟಕ್ಕೆ ಸರ್ಜರಿ ನಡೆಯುವ ಬಗ್ಗೆ ಬಿಜೆಪಿ ಹೈಕಮಾಂಡ್ನಿಂದ ಈಗ ಸಂದೇಶ ಬರಬಹುದು ಆಗ ಸಂದೇಶ ಬರಬಹುದು ಎಂಬ ನಿರೀಕ್ಷೆಯಲ್ಲಿರುವ ರಾಜ್ಯ ನಾಯಕರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಿದೇಶ ಪ್ರವಾಸದಿಂದ ವಾಪಸಾದ ಹಿನ್ನೆಲೆಯಲ್ಲಿ ಏನಾದರೂ ನಿರ್ಧಾರ ಹೊರಬೀಳಬಹುದು ಎಂದು ಚಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ.
ಬೆಂಗಳೂರು (ಮೇ. 06): ಸಿಎಂ ಬಸವರಾಜ ಬೊಮ್ಮಾಯಿ (Basavraj Bommai) ಅವರ ಸಂಪುಟಕ್ಕೆ ಸರ್ಜರಿ ನಡೆಯುವ ಬಗ್ಗೆ ಬಿಜೆಪಿ ಹೈಕಮಾಂಡ್ನಿಂದ ಈಗ ಸಂದೇಶ ಬರಬಹುದು ಆಗ ಸಂದೇಶ ಬರಬಹುದು ಎಂಬ ನಿರೀಕ್ಷೆಯಲ್ಲಿರುವ ರಾಜ್ಯ ನಾಯಕರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಿದೇಶ ಪ್ರವಾಸದಿಂದ ವಾಪಸಾದ ಹಿನ್ನೆಲೆಯಲ್ಲಿ ಏನಾದರೂ ನಿರ್ಧಾರ ಹೊರಬೀಳಬಹುದು ಎಂದು ಚಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ.
ಸಂಪುಟ ಕಸರತ್ತಿನ ಚೆಂಡು ಹೈಕಮಾಂಡ್ ಅಂಗಳದಲ್ಲಿರುವುದರಿಂದ ಸಚಿವ ಸ್ಥಾನದ ಆಕಾಂಕ್ಷಿಗಳು ಹಾಗೂ ಸಂಪುಟ ಪುನಾರಚನೆಯಾದರೆ ಸ್ಥಾನ ಕಳೆದುಕೊಳ್ಳಬೇಕಾಗಬಹುದು ಎಂಬ ಆತಂಕದಲ್ಲಿರುವ ಸಚಿವರು ದೆಹಲಿಯತ್ತ ನೋಟ ಹರಿಸಿದ್ದಾರೆ.