ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಚಿಕ್ಕಣ್ಣ, ಆಪ್ತರಿಗೆಲ್ಲಾ ಸಂಕಷ್ಟ!

Jun 17, 2024, 11:28 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ವಿಚಾರಣೆ ತೀವ್ರಗೊಳ್ಳುತ್ತಿದ್ದಂತೆ ಹಲವರಿಗೆ ಸಂಕಷ್ಟ ಹೆಚ್ಚಾಗಿದೆ. ಈ ಪ್ರಕರಣ ಸಂಬಂಧ ಇದೀಗ ಹಾಸ್ಯ ನಟ ಚಿಕ್ಕಣ್ಣ ಕರೆಯಿಸಿ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ಗೆ ಕರೆಯಿಸಿ ಸ್ಥಳ ಮಹಜರು ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ರಾಜು ಬಂಧಿಸಿದ ಪೊಲೀಸರು ಆತನಿಂದ ಮೆಗ್ಗರ್ ಮಶಿನ್ ವಶಕ್ಕೆ ಪಡೆದಿದ್ದಾರೆ. ಈ ಮೆಗ್ಗರ್ ಮಶೀನ್ ಬಳಸಿ ರೇಣುಕಾಸ್ವಾಮಿಗೂ ಮೊದಲು ಯಾರಿಗಾದರೂ ಶಾಕ್ ಕೊಡಲಾಗಿತ್ತೇ? ಎಂದು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.