ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ (Cabinet Reshuffle) ಟೆನ್ಷನ್ ಶುರುವಾಗಿದೆ. ಸಂಪುಟ ವಿಸ್ತರಣೆಗೆ ಒತ್ತಡ ಶುರುವಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಪುಟ ವಿಸ್ತರಣೆಗೆ ಪಟ್ಟು ಹೆಚ್ಚಾಗಿದೆ.
ಬೆಂಗಳೂರು (ಜ. 24): ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ (Cabinet Reshuffle) ಟೆನ್ಷನ್ ಶುರುವಾಗಿದೆ. ಸಂಪುಟ ವಿಸ್ತರಣೆಗೆ ಒತ್ತಡ ಶುರುವಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಪುಟ ವಿಸ್ತರಣೆಗೆ ಪಟ್ಟು ಹೆಚ್ಚಾಗಿದೆ. ಹಾಲಿ ಸಚಿವರ ವಿರುದ್ಧ ಸಚಿವಾಕಾಂಕ್ಷಿಗಳು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ. ಹಿರಿಯ ಸಚಿವರನ್ನು ಕೈ ಬಿಟ್ಟು ತಮಗೆ ಅವಕಾಶ ನೀಡಲು ಬಿಗಿಪಟ್ಟು ಹಿಡಿದಿದ್ದಾರೆ. ಸಿಎಂ ಮೇಲೆ ಒತ್ತಡ ಹೆಚ್ಚಿದೆ.