BJP Core Committee Meeting: ಸಿಎಂ ಬೊಮ್ಮಾಯಿ ಜೊತೆ RSS ಮುಖಂಡ ಮುಕುಂದ್ ಮಹತ್ವದ ಚರ್ಚೆ

Nov 7, 2021, 1:18 PM IST

ಬೆಂಗಳೂರು (ನ. 07): ಸಿಎಂ ಬೊಮ್ಮಾಯಿ (Basavaraj Bommai) ಜೊತೆ ಆರ್‌ಎಸ್‌ಎಸ್  (RSS)ಮುಖಂಡ ಮುಕುಂದ್ ಚರ್ಚೆ ನಡೆಸಿದ್ದಾರೆ. ಪ್ರಸಕ್ತ ರಾಜ್ಯ ರಾಜಕೀಯ, ರಾಷ್ಟ್ರೀಯ ಕಾರ್ಯಕಾರಣಿ ಹಾಗೂ ಉಪಚುನಾವಣಾ (Byelection) ಸೋಲು ಗೆಲುವಿನ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇದರ ಬಗ್ಗೆ ಸಿಎಂ ಬೊಮ್ಮಾಯಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 

Mangaluru: ಸುರತ್ಕಲ್ ಸರ್ಕಲ್‌ಗೆ ಸಾವರ್ಕರ್ ಹೆಸರು: ಕಾಂಗ್ರೆಸ್ ತೀವ್ರ ಆಕ್ಷೇಪ, ಹೋರಾಟದ ಎಚ್ಚರಿಕೆ

ಮುಂದಿನ ದಿನಗಳಲ್ಲಿ 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವುದರಿಂದ ಗೆಲುವಿನ ಕಾರ್ಯತಂತ್ರಗಳನ್ನು ರೂಪಿಸಲು ಬಿಜೆಪಿ ಭಾನುವಾರ ಕಾರ್ಯಕಾರಿಣಿ ಸಭೆಯನ್ನು ನಡೆಸಲಿದೆ. ಕೋವಿಡ್‌ ಸಾಂಕ್ರಾಮಿಕದ ನಂತರ ಮೊದಲ ಬಾರಿ ಈ ಸಭೆ ನಡೆಯುತ್ತಿದೆ.