Russia Ukraine Crisis: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಕರ್ನಾಟಕದ ಎಂಬಿಬಿಎಸ್ ವಿದ್ಯಾರ್ಥಿ!

Russia Ukraine Crisis: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಕರ್ನಾಟಕದ ಎಂಬಿಬಿಎಸ್ ವಿದ್ಯಾರ್ಥಿ!

Published : Feb 24, 2022, 06:31 PM IST

ಉಕ್ರೇನ್ ದೇಶದ ಮೇಲೆ ರಷ್ಯಾದ ಆಕ್ರಮಣ
ಉಕ್ರೇನ್ ಹಲವು ಪ್ರದೇಶಗಳು ಧ್ವಂಸ
ರಷ್ಯಾ ಉಕ್ರೇನ್ ನಲ್ಲಿ ಸಿಲುಕಿಹಾಕಿಕೊಂಡಿರುವ ಭಾರತದ ವಿದ್ಯಾರ್ಥಿಗಳು

ಬೆಂಗಳೂರು (ಫೆ.24): ರಷ್ಯಾ (Russia) ಹಾಗೂ ಉಕ್ರೇನ್ ನ (Ukraine) ನಡುವೆ ಭೀಕರ ಯುದ್ಧ ಆರಂಭವಾಗಿರುವ ಬೆನ್ನಲ್ಲಿಯೇ ಎರಡೂ ದೇಶವನ್ನು ತೊರೆಯುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅದರಲ್ಲೂ ಉಕ್ರೇನ್ ನಲ್ಲಿ ಭಾರೀ ಪ್ರಮಾಣದ ಸಾವುನೋವುಗಳು ಉಂಟಾಗಿದ್ದು, ಅಲ್ಲಿರುವ ನಾಗರೀಕರನ್ನು ಭಾರತಕ್ಕೆ ವಾಪಾಸ್ ಕರೆತರುವ ಪ್ರಯತ್ನ ನಡೆಯುತ್ತಿದೆ. ಕರ್ನಾಟಕದ ಗದಗ ಜಿಲ್ಲೆಯ ಎಂಬಿಬಿಎಸ್ (MBBS) ವಿದ್ಯಾರ್ಥಿ ಕೂಡ ಉಕ್ರೇನ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ.

ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಮಹಾಗಣಪತಿ ಬಿಳಿಮಗ್ಗದ ಉಕ್ರೇನ್ ನಲ್ಲಿ ವೈದ್ಯಕೀಯ ಶಿಕ್ಷಣ ಓದುತ್ತಿದ್ದಾರೆ. ಈ ನಡುವೆ ತಮ್ಮ ಮಗ ಸುರಕ್ಷಿತವಾಗಿದ್ದಾನೆ ಎಂದು ಮಹಾಗಣಪತಿ ಅವರ ಪಾಲಕರು ಹೇಳಿದ್ದಾರೆ. ಯುದ್ಧಪೀಡಿತ ಪ್ರದೇಶದಿಂದ ನಾವು ಸ್ವಲ್ಪ ದೂರದಲ್ಲಿದ್ದೇವೆ. ಇಲ್ಲಿಯವರೆಗೂ ಯುದ್ಧದ ಪರಿಣಾಮ ನಮ್ಮ ಮೇಲಾಗಿಲ್ಲ. ಸದ್ಯದ ಮಟ್ಟಿಗೆ ನಾವು ಸುರಕ್ಷಿತವಾಗಿದ್ದೇವೆ. ಆದರೆ, ರಷ್ಯಾದ ಆಕ್ರಮಣ ತೀವ್ರವಾಗಿರುವ ಬೆನ್ನಲ್ಲಿಯೇ ಹೆಚ್ಚಿನ ವಿದ್ಯಾರ್ಥಿಗಳು ತವರಿಗೆ ಹೋಗುತ್ತಿದ್ದಾರೆ. ಈ ನಡುವೆ ಏರ್ ಪೋರ್ಟ್ ಗಳು ಬಂದ್ ಆಗಿರುವ ಕಾರಣ ಇಲ್ಲಿಂದ ಯಾವಾಗ ಸುರಕ್ಷಿತವಾಗಿ ಹೊರಹೋಗುತ್ತೇವೆ ಎನ್ನುವ ಅರಿವಿಲ್ಲ' ಎಂದು ಮಹಾಗಣಪತಿ ಉಕ್ರೇನ್ ನಿಂದಲೇ ಸುವರ್ಟ್ ನ್ಯೂಸ್ ಜೊತೆ ಮಾತನಾಡಿದ್ದಾರೆ.

Russia Ukraine War ಉಕ್ರೇನ್‍ನಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ತಾವಿರುವ ಪ್ರದೇಶದಲ್ಲಿ ಈವರೆಗೂ ಯಾವುದೇ ದಾಳಿಯಾಗಿಲ್ಲ. ದಾಳಿ ನಡೆಯುತ್ತಿರುವ ಪ್ರದೇಶದಿಂದ ನಾವಿರುವ ಪ್ರದೇಶ 400 ಕಿಲೋಮೀಟರ್ ದೂರದಲ್ಲಿದೆ ಎಂದು ಮಹಾಗಣಪತಿ ತಿಳಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more