ಧರ್ಮಸ್ಥಳ ಕೇಸಿನ ಷಡ್ಯಂತ್ರದ ಮಾಸ್ಟರ್ ಮೈಂಡ್ ಕೈ ಸಂಸದ ಸೆಂಥಿಲ್; ರೆಡ್ಡಿ ಆರೋಪಕ್ಕೆ ಗಣಿ ಕೇಸ್ ಕೆಣಕಿದ ಸಸಿಕಾಂತ್!

ಧರ್ಮಸ್ಥಳ ಕೇಸಿನ ಷಡ್ಯಂತ್ರದ ಮಾಸ್ಟರ್ ಮೈಂಡ್ ಕೈ ಸಂಸದ ಸೆಂಥಿಲ್; ರೆಡ್ಡಿ ಆರೋಪಕ್ಕೆ ಗಣಿ ಕೇಸ್ ಕೆಣಕಿದ ಸಸಿಕಾಂತ್!

Published : Aug 21, 2025, 06:02 PM IST
ಧರ್ಮಸ್ಥಳ ಷಡ್ಯಂತ್ರದಲ್ಲಿ ಸಸಿಕಾಂತ್ ಸೆಂಥಿಲ್ ಮಾಸ್ಟರ್ ಮೈಂಡ್ ಎಂಬ ಜನಾರ್ದನ ರೆಡ್ಡಿ ಆರೋಪಕ್ಕೆ ಸೆಂಥಿಲ್ ತಿರುಗೇಟು ನೀಡಿದ್ದಾರೆ. ರೆಡ್ಡಿ ಸೆಂಥಿಲ್ ಅವರನ್ನು ಹಿಂದೂ ವಿರೋಧಿ ಎಂದು ಕರೆದಿದ್ದಾರೆ. ಸೆಂಥಿಲ್ ತನಿಖೆಗೆ ಸಹಕರಿಸಬೇಕೆಂದು ರೆಡ್ಡಿ ಒತ್ತಾಯಿಸಿದ್ದಾರೆ.

ಬೆಂಗಳೂರು (ಆ.21): ಧರ್ಮಸ್ಥಳ ಷಡ್ಯಂತ್ರದ ಹಿಂದಿನ ಮಾಸ್ಟರ್ ಮೈಂಡ್ ಸಸಿಕಾಂತ್ ಸೆಂಥಿಲ್ ಎಂದು ಶಾಸಕ ಜನಾರ್ದನ ರೆಡ್ಡಿ ಮಾಡಿದ್ದ ಆರೋಪಕ್ಕೆ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ತಿರುಗೇಟು ನೀಡಿದ್ದರು. ಇದೀಗ ಸೆಂಥಿಲ್ ಅವರ ಹೇಳಿಕೆಗೆ ಜನಾರ್ದನ ರೆಡ್ಡಿ ಮತ್ತೊಮ್ಮೆ ಪ್ರತ್ಯುತ್ತರ ನೀಡಿದ್ದು, 'ಸೆಂಥಿಲ್ ಹೇಳಿರುವುದು ಸಂಪೂರ್ಣ ಸುಳ್ಳು, ಅವರು ಹಿಂದೂ ವಿರೋಧಿ' ಎಂದು ಕಿಡಿಕಾರಿದ್ದಾರೆ.

ಗಣಿ ಹಗರಣದ ಬಗ್ಗೆ ರೆಡ್ಡಿ-ಸೆಂಥಿಲ್ ನಡುವೆ ವಾಕ್ಸಮರ
ನಾನು ಬಳ್ಳಾರಿ ಸಹಾಯಕ ಆಯುಕ್ತನಾಗಿದ್ದಾಗ ಜನಾರ್ದನ ರೆಡ್ಡಿ ಅವರ ಅಕ್ರಮಗಳನ್ನು ಬಯಲಿಗೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೆ. ಬಹುಶಃ ಇದೇ ಕಾರಣಕ್ಕೆ ಅವರು ಹತಾಶೆಯಿಂದ ಆರೋಪ ಮಾಡುತ್ತಿದ್ದಾರೆ' ಎಂದು ಸಸಿಕಾಂತ್ ಸೆಂಥಿಲ್ ಹೇಳಿಕೆ ನೀಡಿದ್ದರು. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಜನಾರ್ದನ ರೆಡ್ಡಿ, 'ನನ್ನ ಮೇಲೆ ಸಿಬಿಐ ಪ್ರಕರಣ ದಾಖಲಾದಾಗ ಸೆಂಥಿಲ್ ಬಳ್ಳಾರಿಯಲ್ಲಿ ಎ.ಸಿ. ಆಗಿರಲಿಲ್ಲ. ನನ್ನ ಬಂಧನವಾದ ನಂತರ ಅವರು ಅಲ್ಲಿ ಕರ್ತವ್ಯಕ್ಕೆ ಸೇರಿಕೊಂಡರು. ಹಾಗಾಗಿ, ನನ್ನ ಪ್ರಕರಣಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ. ಸೆಂಥಿಲ್ ಮತ್ತೊಮ್ಮೆ ಸುಳ್ಳು ಹೇಳಿದ್ದಾರೆ' ಎಂದು ಸ್ಪಷ್ಟಪಡಿಸಿದರು.

ಸೆಂಥಿಲ್ ಹಿಂದೂ ವಿರೋಧಿ
ಸಸಿಕಾಂತ್ ಸೆಂಥಿಲ್ ಅವರನ್ನು 'ಹಿಂದೂ ವಿರೋಧಿ' ಎಂದು ಹೇಳಿದ ಜನಾರ್ದನ ರೆಡ್ಡಿ, ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದಾಗಲೇ ಅವರು ಈ ಬಗ್ಗೆ ಯೋಜನೆ ರೂಪಿಸಿದ್ದರು. 'ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುವಾಗಲೂ ಅವರು ಆರ್ಟಿಕಲ್ 370, ಎನ್‌ಆರ್‌ಸಿ ಮತ್ತು ಸಿಎಎಗೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಎಸ್‌ಡಿಪಿಐ ಸಂಘಟನೆಗಳ ಸಮಾವೇಶಗಳಲ್ಲಿ ಪಾಲ್ಗೊಂಡು ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡಿರುವ ವಿಡಿಯೋಗಳು ಇವೆ. ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡು ಧರ್ಮಸ್ಥಳದಂತಹ ಪುಣ್ಯಕ್ಷೇತ್ರಕ್ಕೆ ಕಳಂಕ ತಂದ ವ್ಯಕ್ತಿ ಸಸಿಕಾಂತ್ ಸೆಂಥಿಲ್' ಎಂದು ರೆಡ್ಡಿ ಗಂಭೀರ ಆರೋಪ ಮಾಡಿದರು.

ಧೈರ್ಯವಿದ್ದರೆ ತನಿಖೆಗೆ ನಿಲ್ಲಲಿ
ನನ್ನ ಬಂಧನಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಒದಗಿಸಿದ್ದರಿಂದ ನಾನು ಈ ಕುರಿತು ಮಾತನಾಡುತ್ತಿದ್ದೇನೆ ಎಂದು ಸೆಂಥಿಲ್ ಹೇಳಿರುವುದು ಸುಳ್ಳು. ಅವರಿಗೆ ಧೈರ್ಯ ಇದ್ದರೆ ಯಾವುದೇ ತನಿಖೆಗೆ ಮುಂದೆ ಬಂದು ನಿಲ್ಲುತ್ತೇನೆ ಎಂದು ಹೇಳಬೇಕಿತ್ತು' ಎಂದು ರೆಡ್ಡಿ ಸವಾಲೆಸೆದರು. ಸೆಂಥಿಲ್ ಅವರು ದೊಡ್ಡ ಮಟ್ಟದ ವಿಚಾರಣೆಗೆ ಒಳಪಡಬೇಕು. ಆಗ ಮಾತ್ರ ಈ ಧರ್ಮಸ್ಥಳ ಷಡ್ಯಂತ್ರದ ಹಿಂದಿನ 'ಮಾಸ್ಟರ್ ಮೈಂಡ್' ಯಾರು ಎಂಬುದು ಹೊರಬರುತ್ತದೆ ಎಂದು ಜನಾರ್ದನ ರೆಡ್ಡಿ ಪುನರುಚ್ಚರಿಸಿದ್ದಾರೆ. ಈ ಇಬ್ಬರು ರಾಜಕಾರಣಿಗಳ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more