ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಶಾಲಾ ಬಸ್, ಮಕ್ಕಳು ಪ್ರಾಣಾಪಾಯದಿಂದ ಪಾರು

Aug 4, 2022, 4:30 PM IST

ಬೆಂಗಳೂರು (ಆ. 04): ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್‌ವೊಂದು ಹಳ್ಳಕ್ಕೆ ಬಿದ್ದಿರುವ ಘಟನೆ ರಾಮನಗರ ಜಿಲ್ಲೆ ಕುದೂರು ಬಳಿ ನಡೆದಿದೆ. ಬಸ್‌ನಲ್ಲಿದ್ದ 25 ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಲಿಕಲ್ ಗ್ರಾಮದ ಮಾನಸ ಗಂಗೋತ್ರಿ ಶಾಲಾ ಬಸ್ ಇದಾಗಿತ್ತು.