ನಾವು ಇವತ್ತಲ್ಲ ನಾಳೆ ಸಾಯಲೇಬೇಕು, ಹೀಗಾಗಿ ಸಂಘರ್ಷಕ್ಕೆ ತಯಾರಾಗಿ : ಅಬ್ದುಲ್ ಮಜೀದ್ ಮೈಸೂರು

ನಾವು ಇವತ್ತಲ್ಲ ನಾಳೆ ಸಾಯಲೇಬೇಕು, ಹೀಗಾಗಿ ಸಂಘರ್ಷಕ್ಕೆ ತಯಾರಾಗಿ : ಅಬ್ದುಲ್ ಮಜೀದ್ ಮೈಸೂರು

Published : Feb 10, 2024, 12:36 PM IST

ಲಾಠಿ ಏಟು ತಿನ್ನಲು, ಸಂಘರ್ಷಕ್ಕೆ ಎಲ್ಲರೂ ತಯಾರಾಗಿ. ನಾವು ಇವತ್ತಲ್ಲ ನಾಳೆ ಸಾಯಲೇ ಬೇಕು, ಹೀಗಾಗಿ ಸಂಘರ್ಷಕ್ಕೆ ತಯಾರಾಗಿ. ಯಾರೋ ಉಳಿಸ್ತಾರೆ ಅಂತ ಕಾಯಬೇಡಿ, ಬೀದಿಗಿಳಿಯಿರಿ ಹೋರಾಡಿ. ನಾವೆಲ್ಲರೂ ಸಂಘರ್ಷಕ್ಕೆ ತಯಾರಾಗೋಣ ಎಂದು ಅಬ್ದುಲ್ ಮಜೀದ್ ಮೈಸೂರು ಕರೆ ನೀಡಿದ್ದಾರೆ.

ಮಂಗಳೂರು: ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ(Mangalore) SDPI ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ, SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು(Abdul Majeed Mysore) ಸಂಘರ್ಷಕ್ಕೆ ಬಹಿರಂಗ ಕರೆ ನೀಡಿದ್ದಾರೆ. ಸಂಘರ್ಷಕ್ಕೆ ಮತ್ತು ಹುತಾತ್ಮರಾಗಲು ತಯರಾಗಿ ಎಂದಿದ್ದಾರೆ. ಜ್ಞಾನವಾಪಿ ವಿಷಯದಲ್ಲಿ(Gyanvapi Masjid) ಹೈಕೋರ್ಟ್‌ನಲ್ಲಿ ಪ್ರಕರಣ ನಡೀತಾ ಇದೆ. ಆದರೂ ತರಾತುರಿಯಲ್ಲಿ ಕೆಳಗಿನ ಕೋರ್ಟ್‌ನ ಜಡ್ಜ್ ಪೂಜೆಗೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಪೂಜಾ ಸ್ಥಳ ಕಾಯಿದೆಯಡಿ ಯಥಾಸ್ಥಿತಿ ಆದೇಶ ಇದೆ. ಆದರೆ ಆ ಕಾನೂನಿನ ಮೂರು ಕಾಸಿನ ಬೆಲೆ ಕೊಡ್ತಾ ಇಲ್ಲ. ಸಂಘರ್ಷ, ತ್ಯಾಗ, ಬಲಿದಾನ ಮಾಡದೇ ನಮ್ಮ ಸಮಸ್ಯೆಗೆ ಪರಿಹಾರ ಇಲ್ಲ. ಈ ದೇಶದಲ್ಲಿ ಕಾನೂನು ಇದ್ಯಾ? ಕಾನೂನು ಸತ್ತು ಹೋಗಿದೆ. ಯಾವ ಬೆಲೆ ತೆತ್ತಾದರೂ ಮಸೀದಿ, ಮಂದಿರ, ಚರ್ಚ್‌ಗಳನ್ನು ಉಳಿಸಿಕೊಳ್ಳಬೇಕು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದ್ದಿದ್ದನ್ನ ಅಲ್ಲೇ ಉಳಿಸಿಕೊಳ್ಳಬೇಕು. ಸಿದ್ದರಾಮಯ್ಯ, ರಾಹುಲ್, ಸೋನಿಯಾ, ಖರ್ಗೆ ಉಳಿಸ್ತಾರೆ ಅಂತ ಕಾಯಬೇಡಿ. ಜೈಲಿಗೆ ಹೋಗಲು, ಕೇಸುಗಳನ್ನ ಹಾಕಿಸಿಕೊಳ್ಳಲು, ಹುತಾತ್ಮರಾಗಲು ತಯಾರಾಗಿ ಎಂದು ಅಬ್ದುಲ್ ಮಜೀದ್ ಮೈಸೂರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸ್ಟಾರ್‌ವಾರ್‌ನಿಂದ ದೂರ ಉಳಿದ ಸುದೀಪ್..! ಪೈಪೋಟಿಗೆ ಬಿದ್ದು ಸಿನಿಮಾ ಅಪ್‌ಡೇಟ್ ಕೊಡಲ್ಲ ಎಂದ ಕಿಚ್ಚ..!

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more