ಸೂರ್ಯನನ್ನೇ ತಡೆದಿದ್ದೇ ಎಂದಿದ್ದ ನಿತ್ಯಾನಂದನಿಗೆ ಈಗ ಸಾವಿನ ಭಯ!

ಸೂರ್ಯನನ್ನೇ ತಡೆದಿದ್ದೇ ಎಂದಿದ್ದ ನಿತ್ಯಾನಂದನಿಗೆ ಈಗ ಸಾವಿನ ಭಯ!

Published : Sep 04, 2022, 09:49 PM IST

ನಾನೇ ದೇವ್ರು, ಅಷ್ಟದಿಕ್ಕುಗಳನ್ನೇ ನಾನು ಬಂಧಿಸಬಲ್ಲೆ ಎಂದೆಲ್ಲಾ ಹೇಳುತ್ತಿದ್ದ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನಿಗೆ ಈಗ ಸಾವಿನ ಭಯ ಶುರುವಾಗಿದೆ. ನನಗೆ ವೈದ್ಯರ ಸೇವೆ ಬೇಕಿದೆ ಎಂದು ನಿತ್ಯಾನಂದ ಹೇಳಿಕೊಂಡಿದ್ದಾನೆ ಎಂದು ವರದಿಯಾಗಿದೆ.
 

ಬೆಂಗಳೂರು (ಸೆ.4): ಸ್ವಯಂ ಘೋಷಿತ ದೇವಮಾನವ ಎಂದೇ ಕರೆಸಿಕೊಂಡಿದ್ದ ನಿತ್ಯಾನಂದನಿಗೆ ಈಗ ಸಾವಿನ ಭಯ ಶುರುವಾಗಿದೆ. ನಾನೇ ದೇವ್ರು ನನಗೆ ಯಾರ ಭಯವೂ ಇಲ್ಲ ಎಂದು ಓಡಾಡಿಕೊಂಡಿದ್ದ ನಿತ್ಯಾನಂದ ಸಮಾಧಿ ಸೇರಿಕೊಂಡಿದ್ದಾಗಿ ಹೇಳಿದ್ದ. ಈಗ ಸಮಾಧಿಯಿಂದಲೇ ಮತ್ತೊಂದು ಸಂದೇಶ ಬಂದಿದೆ ಎಂದು ಹೇಳಿಕೊಂಡಿದ್ದು, ನನ್ನನ್ನು ಕಾಪಾಡಿ ಎನ್ನುವ ಸಂದೇಶ ಬಂದಿದೆಯಂತೆ.

ಸಮಾಧಿಯಲ್ಲಿರುವ ನಿತ್ಯಾನಂದನಿಗೆ ಈಗ ವೈದ್ಯರ ಸೇವೆ ಬೇಕಾಗಿದೆ ಎಂದು ಹೇಳಿದ್ದಾನೆ. ಅಷ್ಟದಿಕ್ಕುಗಳನ್ನೇ ಬಂಧಿಸಿದ್ದವನು, ಸೂರ್ಯನನ್ನೇ ತಡೆದಿದ್ದೆ ಎಂದು ಹೇಳಿದ್ದ ನಿತ್ಯಾನಂದ ಸ್ವಾಮಿಗೆ ಈಗ ಜೀವ ಭಯ ಶುರುವಾಗಿದೆ. ಕಾಪಾಡಿ ಎಂದು ನಿತ್ಯಾನಂದ (Nithyananda) ಶ್ರೀಲಂಕಾಕ್ಕೆ (Sri Lanka) ಕೇಳಿದ್ದಾರೆ.  ಅತ್ಯಾಚಾರ-ಆರೋಪಿ ನಿತ್ಯಾನಂದ ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದು, ತನ್ನ ಜೀವಕ್ಕೆ ಅಪಾಯವಿದೆ ಎಂದು ತಿಳಿಸುವ ಸಂದರ್ಭದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಕೋರಿದ್ದಾರೆ.

Nithyananda Life in Danger: ಶ್ರೀಲಂಕಾದಲ್ಲಿ ವೈದ್ಯಕೀಯ ಆಶ್ರಯ ಪಡೀತಾರಾ ಸ್ವಯಂಘೋಷಿತ ದೇವಮಾನವ..?

ಅತ್ಯಾಚಾರ-ಆರೋಪಿ ನಿತ್ಯಾನಂದ ತೀವ್ರವಾಗಿ ಅಸ್ವಸ್ಥರಾಗಿದ್ದಾರೆ ಮತ್ತು ಚಿಕಿತ್ಸೆಯ ಅವಶ್ಯಕತೆಯಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಶ್ರೀಲಂಕಾ ಸರ್ಕಾರದ ಉನ್ನತ ಮೂಲವು  ದೃಢಪಡಿಸಿದೆ. ಆಗಸ್ಟ್ 2022 ರಲ್ಲಿ ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರಿಗೆ ಪತ್ರ ಬರೆದಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more