ಸೂರ್ಯನನ್ನೇ ತಡೆದಿದ್ದೇ ಎಂದಿದ್ದ ನಿತ್ಯಾನಂದನಿಗೆ ಈಗ ಸಾವಿನ ಭಯ!

ಸೂರ್ಯನನ್ನೇ ತಡೆದಿದ್ದೇ ಎಂದಿದ್ದ ನಿತ್ಯಾನಂದನಿಗೆ ಈಗ ಸಾವಿನ ಭಯ!

Published : Sep 04, 2022, 09:49 PM IST

ನಾನೇ ದೇವ್ರು, ಅಷ್ಟದಿಕ್ಕುಗಳನ್ನೇ ನಾನು ಬಂಧಿಸಬಲ್ಲೆ ಎಂದೆಲ್ಲಾ ಹೇಳುತ್ತಿದ್ದ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನಿಗೆ ಈಗ ಸಾವಿನ ಭಯ ಶುರುವಾಗಿದೆ. ನನಗೆ ವೈದ್ಯರ ಸೇವೆ ಬೇಕಿದೆ ಎಂದು ನಿತ್ಯಾನಂದ ಹೇಳಿಕೊಂಡಿದ್ದಾನೆ ಎಂದು ವರದಿಯಾಗಿದೆ.
 

ಬೆಂಗಳೂರು (ಸೆ.4): ಸ್ವಯಂ ಘೋಷಿತ ದೇವಮಾನವ ಎಂದೇ ಕರೆಸಿಕೊಂಡಿದ್ದ ನಿತ್ಯಾನಂದನಿಗೆ ಈಗ ಸಾವಿನ ಭಯ ಶುರುವಾಗಿದೆ. ನಾನೇ ದೇವ್ರು ನನಗೆ ಯಾರ ಭಯವೂ ಇಲ್ಲ ಎಂದು ಓಡಾಡಿಕೊಂಡಿದ್ದ ನಿತ್ಯಾನಂದ ಸಮಾಧಿ ಸೇರಿಕೊಂಡಿದ್ದಾಗಿ ಹೇಳಿದ್ದ. ಈಗ ಸಮಾಧಿಯಿಂದಲೇ ಮತ್ತೊಂದು ಸಂದೇಶ ಬಂದಿದೆ ಎಂದು ಹೇಳಿಕೊಂಡಿದ್ದು, ನನ್ನನ್ನು ಕಾಪಾಡಿ ಎನ್ನುವ ಸಂದೇಶ ಬಂದಿದೆಯಂತೆ.

ಸಮಾಧಿಯಲ್ಲಿರುವ ನಿತ್ಯಾನಂದನಿಗೆ ಈಗ ವೈದ್ಯರ ಸೇವೆ ಬೇಕಾಗಿದೆ ಎಂದು ಹೇಳಿದ್ದಾನೆ. ಅಷ್ಟದಿಕ್ಕುಗಳನ್ನೇ ಬಂಧಿಸಿದ್ದವನು, ಸೂರ್ಯನನ್ನೇ ತಡೆದಿದ್ದೆ ಎಂದು ಹೇಳಿದ್ದ ನಿತ್ಯಾನಂದ ಸ್ವಾಮಿಗೆ ಈಗ ಜೀವ ಭಯ ಶುರುವಾಗಿದೆ. ಕಾಪಾಡಿ ಎಂದು ನಿತ್ಯಾನಂದ (Nithyananda) ಶ್ರೀಲಂಕಾಕ್ಕೆ (Sri Lanka) ಕೇಳಿದ್ದಾರೆ.  ಅತ್ಯಾಚಾರ-ಆರೋಪಿ ನಿತ್ಯಾನಂದ ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದು, ತನ್ನ ಜೀವಕ್ಕೆ ಅಪಾಯವಿದೆ ಎಂದು ತಿಳಿಸುವ ಸಂದರ್ಭದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಕೋರಿದ್ದಾರೆ.

Nithyananda Life in Danger: ಶ್ರೀಲಂಕಾದಲ್ಲಿ ವೈದ್ಯಕೀಯ ಆಶ್ರಯ ಪಡೀತಾರಾ ಸ್ವಯಂಘೋಷಿತ ದೇವಮಾನವ..?

ಅತ್ಯಾಚಾರ-ಆರೋಪಿ ನಿತ್ಯಾನಂದ ತೀವ್ರವಾಗಿ ಅಸ್ವಸ್ಥರಾಗಿದ್ದಾರೆ ಮತ್ತು ಚಿಕಿತ್ಸೆಯ ಅವಶ್ಯಕತೆಯಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಶ್ರೀಲಂಕಾ ಸರ್ಕಾರದ ಉನ್ನತ ಮೂಲವು  ದೃಢಪಡಿಸಿದೆ. ಆಗಸ್ಟ್ 2022 ರಲ್ಲಿ ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರಿಗೆ ಪತ್ರ ಬರೆದಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more