ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ'  ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ' ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

Published : Oct 02, 2023, 11:13 PM IST

ಸರ್ವ ಜನಾಂಗದ ಶಾಂತಿಯ ತೋಟ ಎಂದು ಬರೆದ ರಾಷ್ಟ್ರಕವಿ ಕುವೆಂಪು ಅವರ ನಾಡನ್ನು ಮತಾಂಧರು ಮಸಣ ಮಾಡಲು ಹೊರಟಿದ್ದಾರೆ. ಮತಾಂಧರು ದಾಂಧಲೆ ಎಬ್ಬಿಸಿದ್ದಾರೆ, ನೀವೇನು ಹೇಳ್ತೀರಿ ಅಂದರೆ ಇದೇನ್‌ ಹೊಸಾದಾ? ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹೇಳಿದ್ದಾರೆ.
 

ಬೆಂಗಳೂರು (ಅ.2): 'ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ..' ಎಂದು ಬರೆದ ರಾಷ್ಟ್ರಕವಿ ಕುವೆಂಪು ಅವರ ನಾಡನ್ನು ಇಂದು ಮತಾಂಧರು ಮಸಣ ಮಾಡಲು ಹೊರಟಿದ್ದಾರೆ. ದೇಶವನ್ನು ಕಟ್ಟಿದ ಕಲಿಗಳು ರಾರಾಜಿಸಬೇಕಿದ್ದ ಭೂಮಿಯಲ್ಲಿ ಮತಾಂಧ ಔರಂಗಜೇಬ್‌, ಹಿಂದೂಗಳ ಮಾರಣಹೋಮ ಮಾಡಿದ್ದ ಟಿಪ್ಪು ಸುಲ್ತಾನನ ಆಳೆತ್ತರದ ಕಟೌಟ್‌ಗಳು ಕಂಡಿವೆ.

ಕುವೆಂಪು ಬಾಳಿ ಬದುಕಿದ ಜಿಲ್ಲೆಯಾದ ಮಲೆನಾಡು ಶಿವಮೊಗ್ಗದ ರಸ್ತೆಗಳಲ್ಲಿ ಸಾರ್ವಜನಿಕವಾಗಿ ಕತ್ತಿಯ ಪ್ರದರ್ಶನ ಮಾಡಿದ್ದಲ್ಲದೆ, ತಲ್ವಾರ್‌ಗಳನ್ನು ಹಿಡಿದುಕೊಂಡು ಹುಡುಗರು ರಸ್ತೆಯಲ್ಲಿ ಅಡ್ಡಾಡಿದ್ದಾರೆ. ಆ ಬಳಿಕ ನಡೆದ ಗಲಭೆಯಲ್ಲಿ ಹಿಂದುಗಳ ಮನೆಗಳ ಮೇಲೆ ಮತಾಂಧರು ಕಲ್ಲುತೂರಾಟ ಮಾಡಿದ್ದಾರೆ. ಆದರೆ, ಈ ಬಗ್ಗೆ ನಿಮ್ಮ ರಿಯಾಕ್ಷನ್‌ ಏನು ಅಂತಾ ಕೇಳಿದ್ರೆ, ಇದೇನು ಹೊಸದಾ? ಎಂದು ಗೃಹಸಚಿವ ಡಾ. ಜಿ ಪರಮೇಶ್ವರ್‌ ಉಡಾಫೆಯ ಮಾತನ್ನಾಡಿದ್ದಾರೆ.

ಶಿವಮೊಗ್ಗ ಭಾರತದ ಭಾಗವೋ, ಮುಸ್ಲಿಂ ಸಾಮ್ರಾಜ್ಯವೋ? ಪಾಕಿಸ್ತಾನ, ಸಾಬ್ರು ದ್ವಾರಬಾಗಿಲು ನಿರ್ಮಾಣ!

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯಲ್ಲಿ ಉದ್ರಿಕ್ತರಿಂದ ಪೊಲೀಸರು ಮೇಲೂ ಕಲ್ಲುತೂರಾಟ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 24 ಎಫ್‌ಐಆರ್‌ ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more