ಅನಾಥ ಮಹಿಳೆಗೆ  ರಕ್ಷಕನಾದ ಆರಕ್ಷಕ ಅಧಿಕಾರಿ, ಸೂಪರ್ ಕಾಪ್‌ಗೆ ಮೆಚ್ಚುಗೆ!

ಅನಾಥ ಮಹಿಳೆಗೆ ರಕ್ಷಕನಾದ ಆರಕ್ಷಕ ಅಧಿಕಾರಿ, ಸೂಪರ್ ಕಾಪ್‌ಗೆ ಮೆಚ್ಚುಗೆ!

Published : Jul 12, 2023, 09:12 PM IST


ಜೈನ ಮುನಿ ಹತ್ಯೆಯನ್ನು ಖಂಡಿಸಿ ಡಿಸಿ ಕಚೇರಿಯ ಮುಂದೆ ಪ್ರತಿಭಟನೆಯ ವೇಳೆ ಅಲ್ಲಿಗೆ ಬಂದಿದ್ದ ಮಹಿಳೆ, ಕೂತಲ್ಲಿಯೇ ರಕ್ತಕಾರುತ್ತಾ ಬಿದ್ದಿದ್ದಳು. ಈ ವೇಳೆ ಅಲ್ಲಿಯೇ ಇದ್ದ ಪಿಎಸ್‌ಐ ತಿರುಮಲೇಶ್‌ ಮಾನವೀಯತೆ ಮೆರೆದು ಆಕೆಯನ್ನು ರಕ್ಷಣೆ ಮಾಡಿದ್ದಾರೆ.
 

ಶಿವಮೊಗ್ಗ (ಜು.12): ಅನಾಥ ಮಹಿಳೆಗೆ ಆರಕ್ಷಕ ಅಧಿಕಾರಿಯೊಬ್ಬರು ರಕ್ಷಕರಾದ ಘಟನೆ ನಡೆದಿದೆ. ಡಿಸಿ ಕಚೇರಿಯ ಆವರಣದಲ್ಲಿ ರಕ್ತಕಾರುತ ಬಿದ್ದಿದ್ದ ಮಹಿಳೆಯನ್ನು ಪಿಎಸ್‌ಐ ತಿರುಮಲೇಶ್‌ ರಕ್ಷಣೆ ಮಾಡಿದ್ದಾರೆ. ವಿಲವಿಲನೇ ಒದ್ದಾಡುತ್ತಾ ರಕ್ತ ಕಾರುತ್ತಿದ್ದ ಮಹಿಳೆಯನ್ನು ನೋಡಿ, ಆಕೆಯನ್ನು ರಕ್ಷಿಸಿಲು ಮಹಿಳಾ ಪೊಲೀಸರೂ ಹಿಂದೇಟು ಹಾಕಿದ್ದರು.

ವಿ ಎಚ್ ಪಿ, ಜೈನ ಸಂಘ ವತಿಯಿಂದ ಜೈನಮನಿಗಳ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಿಳೆ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಪ್ರಜ್ಞೆ ತಪ್ಪಿ ಬಿದ್ದಿದ್ದ ಮಹಿಳೆಯನ್ನು ಮೇಲೆತ್ತಲು ಮಹಿಳಾ ಪೊಲೀಸರ ಮೀನಾ ಮೇಷ ಎಣಿಸಿದ್ದರು. ಡಿಸಿ ಕಚೇರಿಯ ಮೆಟ್ಟಿಲುಗಳ ಮೇಲೆ ಬಿದ್ದು ರಕ್ತ ಕಾರುತ್ತಿದ್ದ ಮಹಿಳೆಯನ್ನು ಕಂಡು ಪ್ರತಿಭಟನಾಕಾರರು ಓಡಿ ಹೋಗಿದ್ದರು. ಯಾರೊಬ್ಬರೂ ಮಹಿಳೆ ನೆರವಿಗೆ ಬಂದಿರಲಿಲ್ಲ. 108 ಆಂಬುಲೆನ್ಸ್ ಗೆ ಕರೆ ಮಾಡಿ ಎಂದವರೇ ಹೆಚ್ಚಾಗಿದ್ದರು. ಅಸಹಾಯಕ ಮಹಿಳೆಯ ಪರಿಸ್ಥಿತಿ ಕಂಡು ದಿಢೀರನೆ ಎಂಟ್ರಿ ಕೊಟ್ಟ ಸೂಪರ್ ಕಾಪ್ ತಿರುಮಲೇಶ್‌ ಆಕೆಯನ್ನು ರಕ್ಷಿಸಿಸಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕ ಗಾಂಧಿ ಸ್ಪರ್ಧಿಸ್ತಾರಾ?

ಕೋಟೆ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ರಿಂದ ಅಸಹಾಯಕ ಮಹಿಳೆಗೆ ನೆರವಿನ ಹಸ್ತ ಚಾಚಿದ್ದಾರೆ. ಮಹಿಳೆಯನ್ನು ಎರಡು ಕೈಗಳಿಂದ ಹೊತ್ತೊಯ್ದ ತಿರುಮಲೇಶ್, ಪೊಲೀಸ್‌ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.  ಅನಾಥ ಮಹಿಳೆಯನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಪ್ರಾಣ ರಕ್ಷಣೆ ಮಾಡಿದ್ದಾರೆ. ಡಿಸಿ ಕಚೇರಿಯ ಆವರಣದಲ್ಲಿ ಈ ಮಹಿಳೆ ಭಿಕ್ಷೆ ಬೇಡುತ್ತಿದ್ದಳು. ಅನಾಥ ಮಹಿಳೆಯ ಆಸ್ಪತ್ರೆಗೆ ಪೊಲೀಸ್ ವಾಹನದಲ್ಲಿ ಕರೆದ್ಯೊಯ್ದು ದಾಖಲಿಸಿದ ಪಿಎಸ್ಐ ತಿರುಮಲೇಶ್ ಮಾನವೀಯತೆಗೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more