News Hour: ರಾಗಿಗುಡ್ಡದಲ್ಲಿ ಅಕ್ಷರ ಕಲಿಸಿದ ಶಿಕ್ಷಕರ ಮನೆಗೂ ಮುಸ್ಲಿಂ ಪುಂಡರು ದಾಳಿ

News Hour: ರಾಗಿಗುಡ್ಡದಲ್ಲಿ ಅಕ್ಷರ ಕಲಿಸಿದ ಶಿಕ್ಷಕರ ಮನೆಗೂ ಮುಸ್ಲಿಂ ಪುಂಡರು ದಾಳಿ

Published : Oct 05, 2023, 11:26 PM IST

ಬಿಜೆಪಿ ತನ್ನ ಸತ್ಯಶೋಧನಾ ಸಮಿತಿ ಗುರುವಾರ ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡಿತು. ಗಲಭೆಯಲ್ಲಿ ಹಾನಿಯಾದ ಮನೆಗಳಿಗೆ ನಾಯಕರು ಭೇಟಿ ನೀಡಿದ್ದಾರೆ. ಈ ವೇಳೆ ಬಿಜೆಪಿ ನಾಯಕರ ಎದುರು ಸಂತ್ರಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರು (ಅ.5): ಶಿವಮೊಗ್ಗದ ರಾಗಿಗುಡ್ಡದಲ್ಲಿ ಗುರುವಾರ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿತು. ಈ ವೇಳೆ ಉರ್ದು ಶಾಲೆಯ ಶಿಕ್ಷಕಿ ಪತಿ ಮಾತನಾಡಿದ್ದು, ತಮ್ಮ ಪತ್ನಿಯ ಸಾಕಷ್ಟು ವಿದ್ಯಾರ್ಥಿಗಳೇ ಮನೆಗೆ ಕಲ್ಲು ಹೊಡೆದಿದ್ದಾರೆ. ಇದನ್ನು ನೋಡೋಕೆ ಬೇಸರವಾಗಿತ್ತು ಎಂದು ಕಣ್ಣೀರಿಟ್ಟಿದ್ದಾರೆ.

ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡುವ ಮುನ್ನ ಗಲಭೆಯಲ್ಲಿ ಗಾಯಾಳುಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದವರನ್ನು ಬಿಜೆಪಿ ನಾಯಕರು ಭೇಟಿ ಮಾಡಿ ಧೈರ್ಯ ತುಂಬಿದರು. ಸತ್ಯಶೋಧನೆ ಬಳಿಕ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಎಂಎಲ್‌ಸಿ ಭಾರತಿ ಶೆಟ್ಟಿ, ಗಲಭೆಯ ವೇಳೆ ಮಹಿಳೆಯರ ಅಂಗಾಂಗ ಮುಟ್ಟಿ ದೌರ್ಜನ್ಯ ಎಸಗಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

News Hour: ರಾಗಿಗುಡ್ದದಲ್ಲಿ ಈಗ ರಾಜಕೀಯ ಕೆಸರು, ಮತಾಂಧನಿಗೆ ಲಾಠಿ ರುಚಿ ಕೊಟ್ಟ ಪೊಲೀಸರು!

ಗಲಭೆಗೆ ನೇರವಾಗಿ ಬಿಜೆಪಿಯೇ ಕಾರಣ ಎಂದು ದೂರಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಹೇಳಿಕೆಯನ್ನೇ ಗುರುವಾರ ಸರ್ಕಾರದ ಇನ್ನಿಬ್ಬರು ಸಚಿವರಾದ ಚೆಲುವರಾಯಸ್ವಾಮಿ ಹಾಗೂ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಬಿಜೆಪಿಯವರು ಗಲಭೆ ಆಗಲಿ ಅನ್ನೋದನ್ನೇ ಕಾಯ್ತಾ ಇರ್ತಾರೆ ಎಂದು ದಿನೇಶ್‌ ಗುಂಡೂರಾವ್‌ ಮಾತನಾಡಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more