ಬಿಎಂಟಿಸಿ ಚಾಲಕರ ಹೃದಯಕ್ಕೆ ಕಾದಿದೆ ಆಪತ್ತು: ಜಯದೇವ ವೈದ್ಯರ ಶಾಕಿಂಗ್ ವರದಿ ಬಯಲು

ಬಿಎಂಟಿಸಿ ಚಾಲಕರ ಹೃದಯಕ್ಕೆ ಕಾದಿದೆ ಆಪತ್ತು: ಜಯದೇವ ವೈದ್ಯರ ಶಾಕಿಂಗ್ ವರದಿ ಬಯಲು

Published : Nov 06, 2023, 11:03 AM IST

BMTC ಬಸ್ ಓಡಿಸುತ್ತಿರುವ ಚಾಲಕರಿಗೆ ಶಾಕಿಂಗ್ ನ್ಯೂಸ್ ಕಾದಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ಸಂಸ್ಥೆಗಾಗಿ ಹಗಲು-ರಾತ್ರಿ ದುಡಿಯುತ್ತಿರುವ ಬಹತೇಕ ಡ್ರೈವರ್ ಗಳ ಹೃದಯ ಅಪಾಯದಲ್ಲಿಯಂತೆ. ಜಯದೇವ ಆಸ್ಪತ್ರೆ ವೈದ್ಯರ ವರದಿಯಲ್ಲಿ ಈ ಆಘಾತಕಾರಿ ಅಂಶ ಬಯಲಾಗಿದೆ.
 

ಬಸ್‌ಗಳ ಕೊರತೆ, ಓವರ್ ಟೈಂ ಡ್ಯೂಟಿ, ಹಬ್ಬದ ದಿನವೂ ಕೆಲಸ, ಸದಾ ಕಿರಿಕಿರಿ, ಒತ್ತಡ ಇದು ಬಿಎಂಟಿಸಿ ಚಾಲಕರು(BMTC Drivers) ಹಾಗೂ ನಿರ್ವಹಕರ ನಿತ್ಯದ ಗೋಳು. ಶಕ್ತಿ ಯೋಜನೆ (Shakti Scheme) ಜಾರಿಯಾದ ನಂತರ ಈ ಸಮಸ್ಯೆ ದುಪ್ಪಟ್ಟಾಗಿದೆ. ಬಸ್‌ಗಳ ಶಾರ್ಟೇಜ್ ನಡುವೆ ಬಿಎಂಟಿಸಿ ಜನರಿಗಾಗಿ ಇರೋ‌ ಬಸ್ ನಲ್ಲಿಯೇ ಹೆಚ್ಚುವರಿ ಟ್ರಿಪ್ ಮಾಡಿಸ್ತಿದೆ. ಇದು ಚಾಲಕರ ಜೀವಕ್ಕೆ ಆಪತ್ತು ಎದುರಾಗುವ ಆತಂಕ ಮೂಡಿಸಿದೆ. ಬಿಎಂಟಿಸಿ ಚಾಲಕರು ಹೃದ್ರೋಗದ(Heart attack) ಅಪಾಯದಲ್ಲಿದ್ದಾರೆ. ಬಿಎಂಟಿಸಿ ಚಾಲಕರ ಪೈಕಿ ಶೇಕಡ 40-50ರಷ್ಟು ಜನ ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂಬುದು ಜಯದೇವ ಆಸ್ಪತ್ರೆ ನಡೆಸಿದ ಆರೋಗ್ಯ ತಪಾಸಣೆಯಿಂದ ಬೆಳಕಿಗೆ ಬಂದಿದೆ. ಜಯದೇವ ಆಸ್ಪತ್ರೆಯಲ್ಲಿ ಕಳೆದ 12 ತಿಂಗಳಿನಲ್ಲಿ 8 ಸಾವಿರದ 200 ಬಿಎಂಟಿಸಿ ಚಾಲಕರ ಆರೋಗ್ಯ ತಪಾಸಣೆ ನಡೆಸಲಾಗಿದೆ. ತಪಾಸಣೆಗೆ ಒಳಗಾದ ಶೇಕಡಾ 40 ರಷ್ಟು ಚಾಲಕರಿಗೆ ಮಧುಹೇಹ ಇರೋದು ಪತ್ತೆಯಾಗಿದೆ. ಇಷ್ಟೇ ಅಲ್ಲಾ ಶೇ. 40 ರಷ್ಟು ಚಾಲಕರಿಗೆ ಅಧಿಕದೊತ್ತಡ, ಶೇ. 62 ರಷ್ಟು ಚಾಲಕರಿಗೆ ಹೈ ಕೊಲೆಸ್ಟಲ್ ಪತ್ತೆಯಾಗಿದೆ.  ಭವಿಷ್ಯದಲ್ಲಿ ಹೃದಯ ಸಂಬಂಧಿಸಿದ ಕಾಯಿಲೆಗೆ ಒಳಗಾಗಲಿದ್ದಾರೆ ಅಂತ ವೈದ್ಯರ ಎಚ್ಚರಿಕೆ ನೀಡಿದ್ದಾರೆ. ಇನ್ನು ನೌಕರರಿಗೆ ಕಡಿಮೆ ದರದಲ್ಲಿ ಉತ್ತಮ ಚಿಕಿತ್ಸೆ ನೀಡಲು ಸಾರಿಗೆ ಇಲಾಖೆ ಮುಂದಾಗಿದೆ. ಇತ್ತಿಚಿನ‌ ದಿನದಲ್ಲಿ ಹಠಾತ್ ಹೃದಯಘಾತದಿಂದ ಸಾಯುತ್ತಿರುವವರ ಸಂಖ್ಯೆ ಅಧಿಕವಾಗಿದೆ. ಇದರಲ್ಲಿ ಬಿಎಂಟಿಸಿ ನೌಕರರೇ ಹೆಚ್ಚಾಗಿರೋದು ಆಘಾತಕಾರಿ ಸಂಗತಿ. ಹೀಗಾಗಿ ಹೃದಯದ ಬಗ್ಗೆ ಕಾಳಜಿ ವಹಿಸೋದು ಅಗತ್ಯ ಅಂತಾರೆ ತಜ್ಞರು.

ಇದನ್ನೂ ವೀಕ್ಷಿಸಿ:  ರಾಜಧಾನಿ ಬೆಂಗಳೂರಿಗೆ ಶುರುವಾಯ್ತು ಚಿರತೆ ಕಾಟ! ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮತ್ತೊಂದು ಪ್ರತ್ಯಕ್ಷ

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more