ಬಿಎಂಟಿಸಿ ಚಾಲಕರ ಹೃದಯಕ್ಕೆ ಕಾದಿದೆ ಆಪತ್ತು: ಜಯದೇವ ವೈದ್ಯರ ಶಾಕಿಂಗ್ ವರದಿ ಬಯಲು

ಬಿಎಂಟಿಸಿ ಚಾಲಕರ ಹೃದಯಕ್ಕೆ ಕಾದಿದೆ ಆಪತ್ತು: ಜಯದೇವ ವೈದ್ಯರ ಶಾಕಿಂಗ್ ವರದಿ ಬಯಲು

Published : Nov 06, 2023, 11:03 AM IST

BMTC ಬಸ್ ಓಡಿಸುತ್ತಿರುವ ಚಾಲಕರಿಗೆ ಶಾಕಿಂಗ್ ನ್ಯೂಸ್ ಕಾದಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ಸಂಸ್ಥೆಗಾಗಿ ಹಗಲು-ರಾತ್ರಿ ದುಡಿಯುತ್ತಿರುವ ಬಹತೇಕ ಡ್ರೈವರ್ ಗಳ ಹೃದಯ ಅಪಾಯದಲ್ಲಿಯಂತೆ. ಜಯದೇವ ಆಸ್ಪತ್ರೆ ವೈದ್ಯರ ವರದಿಯಲ್ಲಿ ಈ ಆಘಾತಕಾರಿ ಅಂಶ ಬಯಲಾಗಿದೆ.
 

ಬಸ್‌ಗಳ ಕೊರತೆ, ಓವರ್ ಟೈಂ ಡ್ಯೂಟಿ, ಹಬ್ಬದ ದಿನವೂ ಕೆಲಸ, ಸದಾ ಕಿರಿಕಿರಿ, ಒತ್ತಡ ಇದು ಬಿಎಂಟಿಸಿ ಚಾಲಕರು(BMTC Drivers) ಹಾಗೂ ನಿರ್ವಹಕರ ನಿತ್ಯದ ಗೋಳು. ಶಕ್ತಿ ಯೋಜನೆ (Shakti Scheme) ಜಾರಿಯಾದ ನಂತರ ಈ ಸಮಸ್ಯೆ ದುಪ್ಪಟ್ಟಾಗಿದೆ. ಬಸ್‌ಗಳ ಶಾರ್ಟೇಜ್ ನಡುವೆ ಬಿಎಂಟಿಸಿ ಜನರಿಗಾಗಿ ಇರೋ‌ ಬಸ್ ನಲ್ಲಿಯೇ ಹೆಚ್ಚುವರಿ ಟ್ರಿಪ್ ಮಾಡಿಸ್ತಿದೆ. ಇದು ಚಾಲಕರ ಜೀವಕ್ಕೆ ಆಪತ್ತು ಎದುರಾಗುವ ಆತಂಕ ಮೂಡಿಸಿದೆ. ಬಿಎಂಟಿಸಿ ಚಾಲಕರು ಹೃದ್ರೋಗದ(Heart attack) ಅಪಾಯದಲ್ಲಿದ್ದಾರೆ. ಬಿಎಂಟಿಸಿ ಚಾಲಕರ ಪೈಕಿ ಶೇಕಡ 40-50ರಷ್ಟು ಜನ ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂಬುದು ಜಯದೇವ ಆಸ್ಪತ್ರೆ ನಡೆಸಿದ ಆರೋಗ್ಯ ತಪಾಸಣೆಯಿಂದ ಬೆಳಕಿಗೆ ಬಂದಿದೆ. ಜಯದೇವ ಆಸ್ಪತ್ರೆಯಲ್ಲಿ ಕಳೆದ 12 ತಿಂಗಳಿನಲ್ಲಿ 8 ಸಾವಿರದ 200 ಬಿಎಂಟಿಸಿ ಚಾಲಕರ ಆರೋಗ್ಯ ತಪಾಸಣೆ ನಡೆಸಲಾಗಿದೆ. ತಪಾಸಣೆಗೆ ಒಳಗಾದ ಶೇಕಡಾ 40 ರಷ್ಟು ಚಾಲಕರಿಗೆ ಮಧುಹೇಹ ಇರೋದು ಪತ್ತೆಯಾಗಿದೆ. ಇಷ್ಟೇ ಅಲ್ಲಾ ಶೇ. 40 ರಷ್ಟು ಚಾಲಕರಿಗೆ ಅಧಿಕದೊತ್ತಡ, ಶೇ. 62 ರಷ್ಟು ಚಾಲಕರಿಗೆ ಹೈ ಕೊಲೆಸ್ಟಲ್ ಪತ್ತೆಯಾಗಿದೆ.  ಭವಿಷ್ಯದಲ್ಲಿ ಹೃದಯ ಸಂಬಂಧಿಸಿದ ಕಾಯಿಲೆಗೆ ಒಳಗಾಗಲಿದ್ದಾರೆ ಅಂತ ವೈದ್ಯರ ಎಚ್ಚರಿಕೆ ನೀಡಿದ್ದಾರೆ. ಇನ್ನು ನೌಕರರಿಗೆ ಕಡಿಮೆ ದರದಲ್ಲಿ ಉತ್ತಮ ಚಿಕಿತ್ಸೆ ನೀಡಲು ಸಾರಿಗೆ ಇಲಾಖೆ ಮುಂದಾಗಿದೆ. ಇತ್ತಿಚಿನ‌ ದಿನದಲ್ಲಿ ಹಠಾತ್ ಹೃದಯಘಾತದಿಂದ ಸಾಯುತ್ತಿರುವವರ ಸಂಖ್ಯೆ ಅಧಿಕವಾಗಿದೆ. ಇದರಲ್ಲಿ ಬಿಎಂಟಿಸಿ ನೌಕರರೇ ಹೆಚ್ಚಾಗಿರೋದು ಆಘಾತಕಾರಿ ಸಂಗತಿ. ಹೀಗಾಗಿ ಹೃದಯದ ಬಗ್ಗೆ ಕಾಳಜಿ ವಹಿಸೋದು ಅಗತ್ಯ ಅಂತಾರೆ ತಜ್ಞರು.

ಇದನ್ನೂ ವೀಕ್ಷಿಸಿ:  ರಾಜಧಾನಿ ಬೆಂಗಳೂರಿಗೆ ಶುರುವಾಯ್ತು ಚಿರತೆ ಕಾಟ! ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮತ್ತೊಂದು ಪ್ರತ್ಯಕ್ಷ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more