ಸಿದ್ದರಾಮಯ್ಯ ಯಾವಾಗಲೂ ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರನ್ನು ಸಿಎಂ ಆಗಿ ಮಾಡಿದ್ರಾ.? ಎಂದು ಎಚ್ಡಿಕೆ ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಉತ್ತರಿಸಿದ್ದಾರೆ.
ಬೆಂಗಳೂರು (ಅ. 17): ಸಿದ್ದರಾಮಯ್ಯ (Siddaramaiah) ಯಾವಾಗಲೂ ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರನ್ನು ಸಿಎಂ ಆಗಿ ಮಾಡಿದ್ರಾ.? ಎಂದು ಎಚ್ಡಿಕೆ (HD Kumaraswamy) ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಉತ್ತರಿಸಿದ್ದಾರೆ.
' ಮಹಾತ್ಮ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು. ಮಹಾತ್ಮರ ಬೆನ್ನು ಬಿಡದ ಟೀಕಾಕಾರರು
ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ? ಸಬ್ ಕೋ ಸನ್ಮತಿ ದೇ ಭಗವಾನ್' ಎಂದಿದ್ದಾರೆ.