News Hour: ಗ್ಯಾರಂಟಿ ರದ್ದು ಮಾಡಲು ಹಿಂಬಾಗಿಲ ಹಾದಿ ಹೊಕ್ಕಿದ ಸರ್ಕಾರ, ಬಿಪಿಎಲ್‌ ಕಾರ್ಡ್‌ ಮೇಲೆ ಪ್ರಹಾರ!

News Hour: ಗ್ಯಾರಂಟಿ ರದ್ದು ಮಾಡಲು ಹಿಂಬಾಗಿಲ ಹಾದಿ ಹೊಕ್ಕಿದ ಸರ್ಕಾರ, ಬಿಪಿಎಲ್‌ ಕಾರ್ಡ್‌ ಮೇಲೆ ಪ್ರಹಾರ!

Published : Nov 20, 2024, 11:33 PM IST

ರಾಜ್ಯದಲ್ಲಿ ಸಮರೋಪಾದಿಯಲ್ಲಿ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಎಪಿಎಲ್‌ ಕಾರ್ಡ್‌ಗಳನ್ನಾಗಿ ಬದಲಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಸಾರ್ವಜನಿಕರ ಜನಾಕ್ರೋಶ ಕೂಡ ತ್ರೀವ್ರಗೊಂಡಿದೆ.
 

ಬೆಂಗಳೂರು (ನ.20): ಸರ್ಕಾರಕ್ಕೆ ಹೊರೆಯಾಗಿರುವ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಿದರೆ ಜನಾಕ್ರೋಶಕ್ಕೆ ತುತ್ತಾಗುವ ಅಪಾಯವನ್ನು ಅರಿತ ರಾಜ್ಯ ಸರ್ಕಾರ ಈಗ ಹಿಂಬಾಗಿಲ ಮೂಲಕ ಇದನ್ನು ರದ್ದು ಮಾಡುವ ಪ್ರಯತ್ನ ಮಾಡುತ್ತಿದೆ. ಬಹುತೇಕ ಗ್ಯಾರಂಟಿ ಯೋಜನೆಗಳಿಗೆ ಮೂಲಾಧಾರವಾಗಿರುವ ಬಿಪಿಎಲ್‌ ಕಾರ್ಡ್‌ಗಳನ್ನೇ ರದ್ದು ಮಾಡಿ ಅವುಗಳನ್ನು ಎಪಿಎಲ್‌ ಕಾರ್ಡ್‌ ಮಾಡುವ ಯೋಜನೆ ರೂಪಿಸಿದೆ.

ಆದಾಯ ತೆರಿಗೆ ಪಾವತಿ ಮಾಡುವವರು ಹಾಗೂ ಸರ್ಕಾರಿ ಉದ್ಯೋಗಿಗಳ ಬಿಪಿಎಲ್‌ ಕಾರ್ಡ್‌ ರದ್ದು ಮಾಡುತ್ತಿದ್ದೇವೆ ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದರೂ, ತಳ ಮಟ್ಟದಲ್ಲಿ ದೀನರ, ಬಡ-ಬಲ್ಲಿದರ ಕಾರ್ಡ್‌ಗಳೇ ಹೆಚ್ಚಾಗಿ ರದ್ದಾಗಿ ಎಪಿಎಲ್‌ ಕಾರ್ಡ್‌ಗಳಾಗುತ್ತಿವೆ. ಇದರ ಬೆನ್ನಲ್ಲಿಯೇ ಸರ್ಕಾರದ ಈ ನಡೆಯ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಅನರ್ಹರ ಬಿಪಿಎಲ್​ ಕಾರ್ಡ್​ ರದ್ದು ಮಾಡುವ ವೇಳೆ ಅಗತ್ಯವಿರುವ ಬಡವರಿಗೂ ಸರ್ಕಾರ ಬರೆ ಹಾಕಿದೆ. ಕೂಲಿ ಮಾಡುವ ಸಾವಿರಾರು ವ್ಯಕ್ತುಗಳ ಅನ್ನಕ್ಕೂ  ರಾಜ್ಯ ಸರ್ಕಾರ ಕೈಹಾಕಿದೆ. ಕಾರು,ಮನೆ,ಜಮೀನು ಇಲ್ಲದಿದ್ದರೂ ಕಾರ್ಡ್​ ರದ್ದು ಮಾಡಲಾಗಿದೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more