News Hour: ಕೈ ಸರ್ಕಾರದ ಮೊದಲ ಗ್ಯಾರಂಟಿ ಜಾರಿಗೆ ಕ್ಷಣಗಣನೆ!

News Hour: ಕೈ ಸರ್ಕಾರದ ಮೊದಲ ಗ್ಯಾರಂಟಿ ಜಾರಿಗೆ ಕ್ಷಣಗಣನೆ!

Published : Jun 10, 2023, 11:48 PM IST

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ಮೊದಲ ಗ್ಯಾರಂಟಿಗೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ ಮುಖ್ಯಮಂತ್ರಿ ಸಿದ್ಧರಾಮತ್ಯ ಶಕ್ತಿಸೌಧ ವಿಧಾನಸೌಧದ ಮುಂಭಾಗದಲ್ಲಿ ಮಹಿಳೆಯರ ಉಚಿತ ಬಸ್‌ ಸೇವೆಗೆ ಚಾಲನೆ ನೀಡಲಿದ್ದಾರೆ.
 

ಬೆಂಗಳೂರು (ಜೂ.10): ನೂತನ ಕಾಂಗ್ರೆಸ್‌ ಸರ್ಕಾರದ ಮೊದಲ ಗ್ಯಾರಂಟಿಗೆ ಕ್ಷಣಗಣನೆ ಆರಂಭವಾಗಿದೆ. ಶಕ್ತಿ ಯೋಜನೆಗೆ ಭಾನುವಾರ ಸಿದ್ಧರಾಮಯ್ಯ ಬಿಎಂಟಿಸಿ ಬಸ್‌ನಲ್ಲಿ ಮೊದಲ ಟಿಕೆಟ್‌ ನೀಡುವ ಮೂಲಕ ಚಾಲನೆ ನೀಡಲಿದ್ದಾರೆ. ನಾಳೆ ಮಧ್ಯಾಹ್ನ 1 ಗಂಟೆಯಿಂದ ಈ ಯೋಜನೆ ಜಾರಿಯಾಗಲಿದೆ. ಅದರೊಂದಿಗೆ ಸರ್ಕಾರ ತನ್ನ ಪಂಚ ಗ್ಯಾರಂಟಿಯ ಮೊದಲ ಗ್ಯಾರಂಟಿಯನ್ನು ಜಾರಿ ಮಾಡಲು ಉತ್ಸುಕವಾಗಿದೆ.

ಈ ನಡುವೆ ಪಂಚ ಗ್ಯಾರಂಟಿ ಘೋಷಣೆ ಮಾಡಿ ಅಧಿಕಾರ ಹಿಡಿದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಯ ಛಲವಾದಿ ನಾರಾಯಣ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯರಿಗೆ ಉಚಿತ ಬಸ್‌ ಸೇವೆ ನೀಡುತ್ತಿದ್ದೀರಿ, ಅಲ್ಲಿಯೇ ಪಕ್ಕದಲ್ಲಿರುವ ಆಟೋ ಚಾಲಕರ ಸಮಸ್ಯೆಯನ್ನೂ ಕೇಳಿ ಎಂದು ಹೇಳಿದ್ದಾರೆ. 

‘ಶಕ್ತಿ ಯೋಜನೆ’ ಜಾರಿ: ನಾಳೆ ಬಸ್ ಹತ್ತಿದ್ರೆ ಸಿಎಂ ಸಿದ್ದು ಕಂಡಕ್ಟರ್

2013 ಹಾಗೂ 2023ರಲ್ಲಿ ವರುಣ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಸಿಎಂ ಗಾದಿಗೆ ಏರಿರುವ ಸಿದ್ಧರಾಮಯ್ಯ, ಶನಿವಾರ ತವರು ಕ್ಷೇತ್ರದಲ್ಲಿ ಕೃತಜ್ಞತಾ ಸಮಾರಂಭ ನಡೆಸಿದರು. ಈ ವೇಳೆ ಅವರಿಗೆ ಜನರು ಭರ್ಜರಿ ಸ್ವಾಗತ ನೀಡಿದ್ದಾರೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more