ಮುಡಾ ಪ್ರಕರಣದಿಂದ ಪಕ್ಷಕ್ಕೆ ಮುಜುಗರ, ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್‌ನಲ್ಲೆ ಒತ್ತಾಯ!

Sep 26, 2024, 11:25 PM IST

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೂಗು ಇದೀಗ ಕಾಂಗ್ರೆಸ್ ಪಕ್ಷದಲ್ಲೇ ಕೇಳಿಬರುತ್ತಿದೆ. ಮಾಜಿ ವಿಧಾನಸಭೆ ಸ್ಪೀಕರ್, ಕಾಂಗ್ರೆಸ್ ನಾಯಕ ಕೆಬಿ ಕೋಳಿವಾಡ ಇದೀಗ ಸಿದ್ದರಾಮಯ್ಯ ರಾಜೀನಾಮೆ ಸೂಕ್ತ ಎಂದಿದ್ದಾರೆ. ಆರೋಪ ಕೇಳಿಬಂದಿರುವ ಕಾರಣ ಸಿದ್ದರಾಮಯ್ಯ ರಾಜೀನಾಮೆ ನೀಡಿ, ಆರೋಪ ಮುಕ್ತರಾಗಿ ಮತ್ತೆ ಅಧಿಕಾರ ಸ್ವೀಕರಿಸಬೇಕು ಎಂದಿದ್ದಾರೆ. ಇಲ್ಲಿದ್ದರೆ, ಪ್ರಧಾನಿ ಮುಂದೆ ಮೂರು ರಾಜ್ಯಗಳ ಚುನಾವಣೆಯಲ್ಲಿ ಇದೇ ಅಸ್ತ್ರ ಬಳಸಿಕೊಳ್ಳುತ್ತಾರೆ. ಇದರಿಂದ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದಿದ್ದಾರೆ.